ನಾನು ನಾಲ್ಕನೇ ಕ್ಲಾಸ್ವರೆಗೆ ಓದಿಲ್ಲ ಹಾಗಾದ್ರೆ ನಾನೇನು ದಡ್ಡನಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ

ಬೆಂಗಳೂರು (ಅ.12): ಮಕ್ಕಳಿಗೆ ವಿದ್ಯೆಯನ್ನು ಯಾವಾಗ ಬೇಕಾದರೂ ಕಲಿಸಬಹುದು. ವಿದ್ಯೆಗಿಂತಲೂ ಜೀವ ಮುಖ್ಯ. 

Add Asianetnews Kannada as a Preferred SourcegooglePreferred

ಹೀಗಾಗಿ ಸದ್ಯಕ್ಕೆ ಶಾಲೆಗಳನ್ನು ತೆರೆಯುವುದು ಬೇಡ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಹೇಳಿದ್ದಾರೆ. 

ಒಂದು ವರ್ಷ ತರಗತಿ ನಡೆದಿಲ್ಲ ಎಂದರೆ ಏನೂ ಆಗುವುದಿಲ್ಲ. ನಾನು 4ನೇ ತರಗತಿವರೆಗೆ ಓದಲೇ ಇಲ್ಲ. ಹದಿಮೂರು ಬಜೆಟ್‌ಗಳನ್ನು ಮಂಡಿಸಿದ್ದೇನೆ. ನಾನೇನು ದಡ್ಡನಾ? ತರಗತಿಗಳಿಗೆ ಹಾಜರಾಗುವುದಕ್ಕಿಂತ ಜೀವ ಉಳಿಸುವುದು ಮುಖ್ಯ. 

ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ: ಹಿಗ್ಗಾಮುಗ್ಗಾ ವಾಗ್ದಾಳಿ..!

ಪುಟ್ಟಮಕ್ಕಳನ್ನು ಕೊರೋನಾ ಸೋಂಕು ಭಾರೀ ಏರಿಕೆಯಾಗಿರುವ ಸಮಯದಲ್ಲಿ ಶಾಲೆಗಳಿಗೆ ಕಳುಹಿಸುವುದು ಬೇಡ. ಈ ಬಗ್ಗೆ ಸರ್ಕಾರಕ್ಕೂ ಪತ್ರ ಬರೆದಿದ್ದೇನೆ ಎಂದಿದ್ದಾರೆ.