ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಹಲವೆಡೆ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆ ಮಳೆಯಾದ ವರದಿಯಾಗಿದೆ. ಶಿವಮೊಗ್ಗದ ಹುಂಚದಕಟ್ಟೆಯಲ್ಲಿ ಅತಿ ಹೆಚ್ಚು 6 ಸೆಂ.ಮೀ ಮಳೆಯಾದ ವರದಿಯಾಗಿದೆ.

ಬೆಂಗಳೂರು(ಮೇ.25): ರಾಜ್ಯದಲ್ಲಿ ಶನಿವಾರದವರೆಗೆ ಮಳೆ ಮುಂದುವರೆಯಲಿದ್ದು, ಭಾನುವಾರದಿಂದ ಮಳೆಯ ಪ್ರಮಾಣ ಕಡಿಮೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

Add Asianetnews Kannada as a Preferred SourcegooglePreferred

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಹಲವೆಡೆ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆ ಮಳೆಯಾದ ವರದಿಯಾಗಿದೆ. ಶಿವಮೊಗ್ಗದ ಹುಂಚದಕಟ್ಟೆಯಲ್ಲಿ ಅತಿ ಹೆಚ್ಚು 6 ಸೆಂ.ಮೀ ಮಳೆಯಾದ ವರದಿಯಾಗಿದೆ.

ಅತಿವೃಷ್ಟಿ: ಜೀವಹಾನಿ ತಡೆಗೆ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸಿದ್ದು ಸೂಚನೆ

ಚಿಕ್ಕಮಗಳೂರಿನ ಕಮ್ಮರಡಿ ಹಾಗೂ ಜಯಪುರದಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಹಾಸದ ಶ್ರವಣಬೆಳಗೊಳ 4, ಧರ್ಮಸ್ಥಳ, ಅರಕಲಗೂಡು, ಬೆಂಗಳೂರು ನಗರದಲ್ಲಿ ತಲಾ 3 ಸೆಂ.ಮೀ ಮಳೆಯಾದ ವರದಿಯಾಗಿದೆ. ಕಲಬುರಗಿಯಲ್ಲಿ ಅತಿ ಹೆಚ್ಚು 41.5 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ.