ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಳೆಯಾಗಲಿದ್ದು, ಬೀದರ್, ಬಳ್ಳಾರಿ, ಯಾದಗಿರಿ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆ ಜೊತೆಗೆ ಆರೇಂಜ್ ಅಲರ್ಟ್, ಕೆಲವು ಜಿಲ್ಲೆಗಳಿಗೆ ಸೆಪ್ಟೆಂಬರ್ 2 ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ. 

ಬೆಂಗಳೂರು(ಆ.31):  ಬಂಗಾಳ ಸಾಗರದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಇಂದಿನಿಂದ ಸೆ. 4 ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸೆಪ್ಟೆಂಬರ್ 1 ರಂದು ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಪೂರ್ವ ಅರಬ್ಬೀ ಸಮುದ್ರದ ಗುಜರಾತ್, ಮಹಾರಾಷ್ಟ್ರ, ಕರ್ನಾಟಕ, ಕೇರಳದ ಜಿಲ್ಲೆಗಳಲ್ಲಿ ಟ್ರಪ್ ಮುಂದುವರೆದಿದೆ. ಹೀಗಾಗಿ ಕರಾವಳಿ ತೀರದಲ್ಲಿ ಆಗಸ್ಟ್ 31 ರಿಂದ ಸೆಪ್ಟೆಂಬರ್ 4 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

Cyclone Asna: ಅರಬ್ಬಿ ಸಮುದ್ರದಲ್ಲಿ ಚಂಡಮಾರುತ, ರಾಜ್ಯ ಕರಾವಳಿಯಲ್ಲಿ ಭಾರಿ ಮಳೆ ಎಚ್ಚರಿಕೆ!

ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಳೆಯಾಗಲಿದ್ದು, ಬೀದರ್, ಬಳ್ಳಾರಿ, ಯಾದಗಿರಿ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆ ಜೊತೆಗೆ ಆರೇಂಜ್ ಅಲರ್ಟ್, ಕೆಲವು ಜಿಲ್ಲೆಗಳಿಗೆ ಸೆಪ್ಟೆಂಬರ್ 2 ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದಿನಿಂದ ಸೆಪ್ಟೆಂಬರ್ 4 ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಈ ಬಾರಿ ಗಣೇಶ ಚತುರ್ಥಿ 7 ಸೆಪ್ಟೆಂಬರ್ 2024 ರಂದು ಬಂದಿದೆ. 17 ಸೆಪ್ಟೆಂಬರ್ 2024 ರಂದು ಅನಂತ ಚತುರ್ದಶಿಯಂದು ಕೊನೆಗೊಳ್ಳುತ್ತದೆ. ಈ ದಿನ, ಗಣಪತಿಯ ನೀರಿನಲ್ಲಿ ವಿಸರ್ಜನೆ ಮಾಡುವ ಮೂಲಕ ಗಣಪತಿಗೆ ಬೀಳ್ಕೊಡಲಾಗುತ್ತದೆ. 

ಗಣೇಶೋತ್ಸವಕ್ಕೆ ವರುಣ ಅಡ್ಡಿ?

ಗಣೇಶೋತ್ಸವದಂದು ರಾಜ್ಯಾದ್ಯಂತ ಎಲ್ಲ ಕಡೆ ವಿವಿಧ ಮನರಂಜನಾ ಕಾರ್ಯಕ್ರಮಗಳನ್ನ ಆಯೋಜಿಸಲಾಗುತ್ತದೆ. ಆದರೆ, ಈ ಬಾರಿ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದೆ. ಇಂದಿನಿಂದ ಸೆ. 5ರ ವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಸೆ. 5 ರ ನಂತರವೂ ಮಳೆ ಹೀಗೆ ಮುಂದುವರಿದರೆ ಗಣೇಶೋತ್ಸವದಂದು ಆಯೋಜಿಸುವ ಕಾರ್ಯಕ್ರಮ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಅಡಚಡೆ ಉಂಟಾಗುವ ಸಾಧ್ಯತೆ ಇದೆ.