ಲೋಕಸಭಾ ಚುನಾವಣೆ : ಜೆಡಿಎಸ್ ಗೆ ಬಿಜೆಪಿ ನಾಯಕ ?
ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆಗೆ ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿದ್ದು, ಬಿಜೆಪಿ ನಾಯಕರೋರ್ವರನ್ನು ಪಕ್ಷಕ್ಕೆ ಸೆಳೆಯುವ ಯತ್ನಗಳೂ ನಡೆಯುತ್ತಿವೆ.
ಬೆಂಗಳೂರು : ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರನ್ನು ಜೆಡಿಎಸ್ಗೆ ಕರೆತರುವ ಪ್ರಯತ್ನ ಆರಂಭವಾಗಿದೆ.
ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಿರುವುದರಿಂದ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ತಮಗೆ ಬಿಟ್ಟುಕೊಡುವಂತೆ ಕಾಂಗ್ರೆಸ್ ಮುಂದೆ ಬೇಡಿಕೆ ಇಡುವ ಸಾಧ್ಯತೆಯಿದೆ.
ಒಂದು ವೇಳೆ ಈ ಕ್ಷೇತ್ರ ಜೆಡಿಎಸ್ ಪಾಲಾದಲ್ಲಿ ಸದ್ಯ ಬಿಜೆಪಿಯಲ್ಲಿರುವ ಜಯಪ್ರಕಾಶ್ ಹೆಗ್ಡೆ ಅವರನ್ನು ಕರೆತಂದು ಅಭ್ಯರ್ಥಿಯನ್ನಾಗಿಸುವ ಸಾಧ್ಯತೆ ಇದೆ. ಈ ಸಂಬಂಧ ಒಂದು ಸುತ್ತಿನ ಮಾತುಕತೆಯೂ ನಡೆದಿದೆ ಎಂದು ಮೂಲಗಳು ತಿಳಿಸಿವೆ.