Asianet Suvarna News Asianet Suvarna News

ಲೋಕಸಭಾ ಚುನಾವಣೆ : ಜೆಡಿಎಸ್ ಗೆ ಬಿಜೆಪಿ ನಾಯಕ ?

ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆಗೆ ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿದ್ದು, ಬಿಜೆಪಿ ನಾಯಕರೋರ್ವರನ್ನು ಪಕ್ಷಕ್ಕೆ ಸೆಳೆಯುವ ಯತ್ನಗಳೂ ನಡೆಯುತ್ತಿವೆ.

Lok Sabha Election 2019 JDS Plans To Poach BJP Leader Jayaprakash Hegde
Author
Bengaluru, First Published Feb 20, 2019, 10:55 AM IST

ಬೆಂಗಳೂರು :  ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ ಅವರನ್ನು ಜೆಡಿಎಸ್‌ಗೆ ಕರೆತರುವ ಪ್ರಯತ್ನ ಆರಂಭವಾಗಿದೆ.

ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಿರುವುದರಿಂದ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ತಮಗೆ ಬಿಟ್ಟುಕೊಡುವಂತೆ ಕಾಂಗ್ರೆಸ್‌ ಮುಂದೆ ಬೇಡಿಕೆ ಇಡುವ ಸಾಧ್ಯತೆಯಿದೆ.

ಒಂದು ವೇಳೆ ಈ ಕ್ಷೇತ್ರ ಜೆಡಿಎಸ್‌ ಪಾಲಾದಲ್ಲಿ ಸದ್ಯ ಬಿಜೆಪಿಯಲ್ಲಿರುವ ಜಯಪ್ರಕಾಶ್‌ ಹೆಗ್ಡೆ ಅವರನ್ನು ಕರೆತಂದು ಅಭ್ಯರ್ಥಿಯನ್ನಾಗಿಸುವ ಸಾಧ್ಯತೆ ಇದೆ. ಈ ಸಂಬಂಧ ಒಂದು ಸುತ್ತಿನ ಮಾತುಕತೆಯೂ ನಡೆದಿದೆ ಎಂದು ಮೂಲಗಳು ತಿಳಿಸಿವೆ.

Follow Us:
Download App:
  • android
  • ios