Asianet Suvarna News Asianet Suvarna News

ಗೀತಾ ಶಿವರಾಜ ಕುಮಾರ್ ರಾಜಕಾರಣಕ್ಕೆ ಬಂದು ಡಾ.ರಾಜ್ ಕುಟುಂಬದ ಮರ್ಯಾದೆ ತೆಗೆದಿದ್ದಾರೆ: ಹರತಾಳು ಹಾಲಪ್ಪ ವಾಗ್ದಾಳಿ!

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಭೇಟಿ ಮಾಡಲು ಕ್ಷೇತ್ರದ ಜನರು ಎಲ್ಲಿಗೆ ಹೋಗಬೇಕು? ಬೆಂಗಳೂರಿಗೆ ಹೋಗಬೇಕ? ನಾವು ಬಂಗಾರಪ್ಪ ಮತ್ತು ರಾಜ್‌ಕುಮಾರ್ ಕುಟುಂಬಕ್ಕೆ ಗೌರವ ಕೊಡುತ್ತೇವೆ. ಆದರೆ ಗೀತಾ ಶಿವರಾಜ್ ಕುಮಾರ ರಾಜಕಾರಣಕ್ಕೆ ಬಂದು ಡಾ. ರಾಜ್ ಕುಟುಂಬದ ಮರ್ಯಾದೆ ಕಳೆದಿದ್ದಾರೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಕಿಡಿಕಾರಿದರು.

Lok sabha election 2024 Former minister haratalu halappa outraged against shivamogga congress candidate geeta shivarajkumar rav
Author
First Published Apr 1, 2024, 8:12 PM IST

ಶಿವಮೊಗ್ಗ (ಏ.1): ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಏತ ನೀರಾವರಿ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ಬಿಜೆಪಿ ಆಡಳಿತಾವಧಿಯಲ್ಲಿ ಆಗಿವೆ. ಬಿಎಸ್ ವೈ ಸರ್ಕಾರ ಹೆಣ್ಣು ಮಕ್ಕಳಿಗೆ ಉಚಿತ ಸೈಕಲ್ ನೀಡುವ ಮೂಲಕ ವಿದ್ಯಾವಂತ ರಾಗಲು ಸಹಕಾರ ನೀಡಿದ್ದಾರೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ನುಡಿದರು.

ಇಂದು ಶಿವಮೊಗ್ಗದಲ್ಲಿ ಆಯೋಜಿಸಿದ್ದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿಯ ಹಕ್ಕನ್ನು ನೀಡಲು ಸಂಸದ ರಾಘವೇಂದ್ರ ರಿಂದ ಮಾತ್ರ ಸಾಧ್ಯ. ಹೀಗಾಗಿ ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಒಗ್ಗಟ್ಟಾಗಿ ಶ್ರಮಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.

ಯಾವ ರಾಜಕೀಯ ನಾಯಕರೂ ನನ್ನಷ್ಟು ಮದುವೆ ಸಮಾರಂಭಗಳಿಗೆ ಹೋಗಿಲ್ಲ: ಎಚ್‌ಡಿ ಕುಮಾರಸ್ವಾಮಿ

ಇನ್ನು ಶಿವಮೊಗ್ಗದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿರುವ ಗೀತಾ ಶಿವರಾಜ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಭೇಟಿ ಮಾಡಲು ಕ್ಷೇತ್ರದ ಜನರು ಎಲ್ಲಿಗೆ ಹೋಗಬೇಕು? ಬೆಂಗಳೂರಿಗೆ ಹೋಗಬೇಕ? ನಾವು ಬಂಗಾರಪ್ಪ ಮತ್ತು ರಾಜ್‌ಕುಮಾರ್ ಕುಟುಂಬಕ್ಕೆ ಗೌರವ ಕೊಡುತ್ತೇವೆ. ಆದರೆ ಗೀತಾ ಶಿವರಾಜ್ ಕುಮಾರ ರಾಜಕಾರಣಕ್ಕೆ ಬಂದು ಡಾ. ರಾಜ್ ಕುಟುಂಬದ ಮರ್ಯಾದೆ ಕಳೆದಿದ್ದಾರೆ ಎಂದು ಕಿಡಿಕಾರಿದರು.

'ಈ ಮೋಕ ನಂದು ಗೆದ್ದುಕೋ ನೋಡೋಣ..' ಶ್ರೀರಾಮುಲು ವಿರುದ್ಧ ಸಿನಿಮಾ ಶೈಲಿಯಲ್ಲಿ ಸೆಡ್ಡು ಹೊಡೆದ ಸಚಿವ ನಾಗೇಂದ್ರ!

ನಮ್ಮ ಕೈಗೆ ಸಿಗದ ಕಾಂಗ್ರೆಸ್ ಅಭ್ಯರ್ಥಿ(ಗೀತಾ ಶಿವರಾಜ್ ಕುಮಾರ್) ನಮಗೆ ಬೇಡ. ಸದಾ ನಮ್ಮ ಜೊತೆಗೆ ಇರುವ ರಾಘಣ್ಣ ನಮಗೆ ಬೇಕು. ಹೀಗಾಗಿ ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

Follow Us:
Download App:
  • android
  • ios