Asianet Suvarna News Asianet Suvarna News

ಪ್ರೀತಿಸಿ ಮದುವೆ ಆಗದೇ ಇರೋದು ವಂಚನೆಯಲ್ಲ: ಹೈಕೋರ್ಟ್

ಪ್ರಿತಿಸಿ ಮದುವೆ ಆಗದೇ ಇರೋದು ವಂಚನೆಯಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಮದುವೆ ಆಗ್ತೀನಿ ಅಂತ ಭರವಸೆ ನೀಡಿ ಅದನ್ನ ಉಲ್ಲಂಘನೆ ಮಾಡಿದರೆ ಅದನ್ನ ವಂಚನೆ ಎಂದು ವ್ಯಾಖ್ಯಾನಿಸಲು ಸಾಧ್ಯವಿಲ್ಲ ಎಂದಿದೆ.

love and breach of marriage promise is not cheating says Karnataka high court gow
Author
First Published Nov 12, 2022, 3:45 PM IST

ವರದಿ: ರಮೇಶ್, ಏಷ್ಯಾನೆಟ್ ಸುವರ್ಣನ್ಯೂಸ್

ಬೆಂಗಳೂರು (ನ.12): ಹುಡುಗ ಹುಡಿಗಿ ಪ್ರೀತಿ ಮಾಡ್ತಾ ಇದ್ದಾರೆ ಅಂದ್ರೆ ಅವರು ಮದುವೆ ಆಗಲೇಬೇಕು. ಇಲ್ಲ ಅಂದ್ರೆ ಅದು ಮಹಾವಂಚನೆ ಅನ್ನೋ ಭಾವನೆ ನಮ್ಮ ಸಮಾಜದಲ್ಲಿ ಇಂದಿಗೂ ಇದೆ. ಆದ್ರೆ ಇದೀಗ ಹೈಕೋರ್ಟ್ ಒಂದು ಮಹತ್ವದ ತೀರ್ಪು ನೀಡಿದ್ದು, ಪ್ರೀತಿಸಿ ಮದುವೆ ಆಗದೇ ಇರೋದು ವಂಚನೆಯಲ್ಲ ಎಂದು ಹೇಳಿದೆ. ಮದುವೆ ಆಗ್ತೀನಿ ಅಂತ ಭರವಸೆ ನೀಡಿ ಅದನ್ನ ಉಲ್ಲಂಘನೆ ಮಾಡಿದರೆ ಅದನ್ನ ವಂಚನೆ ಎಂದು ವ್ಯಾಖ್ಯಾನಿಸಲು ಸಾಧ್ಯವಿಲ್ಲ. ವಂಚನೆ ಎಂದರೆ ಏನು ಎಂದು ಭಾರತೀಯ ದಂಡ ಸಂಹಿತೆ (ಐಪಿಸಿ)ಯ ಸೆಕ್ಷನ್ 415ರಲ್ಲಿ ಸ್ಪಷ್ಟವಾಗಿ ವ್ಯಾಖ್ಯಾನಿಸಲಾಗಿದೆ. ಮೋಸದ ಉದ್ದೇಶದಿಂದಲೇ ಒಪ್ಪಂದ ಮಾಡಿ ಉಲ್ಲಂಘಿಸಿದರೆ ಮಾತ್ರ ಅದನ್ನ ವಂಚನೆ ಅಪರಾಧದಡಿ ಶಿಕ್ಷಿಸಲು ಸಾಧ್ಯ. ಆದ್ರೆ ಇಲ್ಲಿ ಮೋಸ ಮಾಡುವ ಉದ್ದೇಶ ಕಂಡು ಬಂದಿಲ್ಲ ಎಂಬ  ಹೈಕೋರ್ಟ್ ಏಕಸದಸ್ಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.  2020ರ ಮೇ5 ರಂದು ಬೆಂಗಳೂರಿನ ರಾಮಮೂರ್ತಿನಗರ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದು ಮಾಡುವಂತೆ ವೆಂಕಟೇಶ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಯುವತಿಯೊಬ್ಬಳು ರಾಮಮೂರ್ತಿ ನಗರ ಪೊಲೀಸ್ ಠಾಣೆಗೆ ದೂರು ನೀಡಿ ವೆಂಕಟೇಶ್  ತನ್ನನ್ನು 8 ವರ್ಷದಿಂದ ಪ್ರೀತಿಸುತ್ತಿದ್ದ. ಎಲ್ಲಡೆ ಸುತ್ತಾಡಿದ್ದು, ಮದುವೆಯಾಗುವ ಭರವಸೆಯನ್ನೂ ನೀಡಿದ್ದ. ಅಷ್ಟೇ ಅಲ್ಲದೆ, ಆತನ ಮನೆಗೂ ಕರೆದುಕೊಂಡು ಹೋಗಿ ಮದುವೆ ಭರವಸೆ ನೀಡಿದ್ದ. ಇಷ್ಟೆಲ್ಲ ಆದ ಮೇಲೂ ಬೇರೆ ಯುವತಿ ಜೊತೆ ವೆಂಕಟೇಶ್ ಮದುವೆಯಾಗಿದ್ದಾನೆ.

ಸ್ವ ಇಚ್ಛೆಯಿಂದ ಇಬ್ಬರು ಮಹಿಳೆಯರು ಒಟ್ಟಿಗೆ ಇರಲು ಬಯಸಿದರೆ ತಡೆಯಲಾಗಲ್ಲ: ಹೈಕೋರ್ಟ್

ವೆಂಕಟೇಶ್ ನನಗೆ ಮೋಸ ಮಾಡಿದ್ದಲ್ಲದೆ, ಇಡೀ ಕುಟುಂಬ ನನಗೆ ಮೋಸ ಮಾಡಿದೆ ಎಂದು ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಳು. ಯುವತಿ ಕೊಟ್ಟ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ರಾಮಮೂರ್ತಿ ನಗರ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ  ನಡೆಸಿದರು. ಯುವತಿಗೆ ಯಾವುದೇ ಮೋಸ ಮಾಡಿಲ್ಲ. ಯುವತಿ ನೀಡಿದ ದೂರು ಕಾನೂನು ಬಾಹಿರವಾಗಿದ್ದು ಪ್ರಕರಣ ರದ್ದು ಮಾಡುವಂತೆ ವೆಂಕಟೇಶ್ ಹೈಕೋರ್ಟ್ ಮೆಟ್ಟಿಲೇರಿದ್ದ. ಸದ್ಯ ಪ್ರಕರಣ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೆ. ನಟರಾಜನ್ ಅವರು ಪ್ರೀತಿಸಿ ಮದುವೆ ಆಗದೇ ಇರೋದು ವಂಚನೆ ಆಗಲ್ಲ ಎಂದು ತೀರ್ಪು ನೀಡಿದ್ದಾರೆ.

ಲಿಂಗರಾಜು ಹತ್ಯೆ: ಮಾಜಿ ಕಾರ್ಪೋರೇಟರ್‌ ಖುಲಾಸೆ

Follow Us:
Download App:
  • android
  • ios