ಬಂಡೀಪುರದಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದ್ದು, ಇದರಿಂದ ಇಲ್ಲಿ ಸದ್ಯ ಟೈಗರ್ ಸಫಾರಿ ಬಂದ್ ಮಾಡಲಾಗಿದೆ. ಒಂದು ವಾರಗಳ ಕಾಲ ಸಫಾರಿ ಬಂದ್ ಆಗಲಿದೆ. 

ಚಾಮರಾಜನಗರ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು ಹಿನ್ನೆಲೆ ಒಂದು ವಾರಗಳ ಕಾಲ ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿರುವ ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಸಫಾರಿ ಝೋನ್ ಬೆಂಕಿಯಿಂದ ನಾಶವಾಗಿದ್ದು, ಈ ನಿಟ್ಟಿನಲ್ಲಿ ಸಫಾರಿ ಬಂದ್ ಮಾಡಲಾಗಿದೆ. 

ಬಂಡೀಪುರ, ನಾಗರಹೊಳೆ ಕಾಡಿನಲ್ಲಿ 2 ಹುಲಿಗಳ ಸಾವು

ಸಫಾರಿಗಾಗಿ ಪ್ರತಿ ನಿತ್ಯ ಬಂಡೀಪುರಕ್ಕೆ ನೂರಾರು ಪ್ರವಾಸಿಗರು ಆಗಮಿಸುತ್ತಿದ್ದು, ಇದರಿಂದ ಲಕ್ಷಾಂತರ ರು. ಆದಾಯ ಸಂದಾಯವಾಗುತ್ತಿತ್ತು. ಆದರೆ ಇದೀಗ ಕಾಡ್ಗಿಚ್ಚಿನಿಂದ ಬಂಡಿಪುರದ 5 ಸಾವಿರಕ್ಕೂ ಹೆಚ್ಚು ಎಕರೆ ಅರಣ್ಯ ನಾಶವಾಗಿದೆ. 

ಬಂಡೀಪುರ ಅಭಯಾರಣ್ಯ: 4 ದಿನಗಳಾದರೂ ನಿಯಂತ್ರಣಕ್ಕೆ ಬಾರದ ಕಾಡ್ಗಿಚ್ಚು

ಅರಣ್ಯ ಇಲಾಖೆ, ಅಗ್ನಿ ಶಾಮಕ ದಳ ಸಿಬ್ಬಂದಿ ಹಾಗೂ ಸ್ವಯಂ ಸೇವಕರ ಹರಸಾಹಸದಿಂದ ಸದ್ಯ ಈ ಪ್ರದೇಶದಲ್ಲೊ ಬೆಂಕಿ ಹತೋಟಿಗೆ ಬಂದಿದೆ.