ಅಯೋಧ್ಯೆಯಲ್ಲಿ ಪೇಜಾವರ ಶ್ರೀಗಳಿಂದ ಮಂಡಲೋತ್ಸವ
ಅಯೋಧ್ಯೆಯಲ್ಲಿ ಸೋಮವಾರ ವೈಭವದ ರಾಮದೇವರ ಪ್ರತಿಷ್ಠೆಯು ನಡೆದಿದ್ದು, ಮಂಗಳವಾರದಿಂದ 48 ದಿನಗಳ ಮಂಡಲೋತ್ಸವ ಆರಂಭವಾಗಿದೆ. ರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಈ ಮಂಡಲೋತ್ಸವದ ನೇತೃತ್ವ ವಹಿಸಿದ್ದಾರೆ.
ಉಡುಪಿ (ಜ.24) : ಅಯೋಧ್ಯೆಯಲ್ಲಿ ಸೋಮವಾರ ವೈಭವದ ರಾಮದೇವರ ಪ್ರತಿಷ್ಠೆಯು ನಡೆದಿದ್ದು, ಮಂಗಳವಾರದಿಂದ 48 ದಿನಗಳ ಮಂಡಲೋತ್ಸವ ಆರಂಭವಾಗಿದೆ. ರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಈ ಮಂಡಲೋತ್ಸವದ ನೇತೃತ್ವ ವಹಿಸಿದ್ದಾರೆ.
ಶ್ರೀಗಳು ಮೊದಲು ಮಂತ್ರಗಳಿಂದ ಪ್ರತಿಮೆಗೆ ತತ್ವನ್ಯಾಸಾದಿಗಳನ್ನು ನೆರವೇರಿಸಿ ಕಲಶಪೂಜೆ, ಚಾಮರಸೇವೆ, ಮಂಗಳಾರತಿಗಳನ್ನು ನೆರವೇರಿಸಿ ಪೂಜೆ ಸಲ್ಲಿಸಿದರು .
ಇದಕ್ಕೂ ಮೊದಲು ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ವಿದ್ವಾನ್ ಸತ್ಯನಾರಾಯಣಾಚಾರ್ಯ, ವಿಷ್ಣುಮೂರ್ತಿ ಆಚಾರ್ಯ, ಶಶಾಂಖ ಭಟ್, ಲಕ್ಷ್ಮೀನಾರಾಯಣ ಭಟ್ ಮೊದಲಾದವರ ನೇತೃತ್ವದಲ್ಲಿ ವಿವಿಧ ಹೋಮ, ಹವನ, ಕಲಶಾರಾಧನೆ ಇತ್ಯಾದಿಗಳು ನೆರವೇರಿದವು.
ರಾಮಮಂದಿರ ನಿರ್ಮಾಣದಲ್ಲಿ ಪೇಜಾವರ ಶ್ರೀಗಳ ಪ್ರಯತ್ನ ಬಹಳ ಇದೆ: ಕಾಣಿಯೂರು ಶ್ರೀ