*  ಸುಮಲತಾಗೆ ಮಾತನಾಡಲು ಅವಕಾಶ ಕಲ್ಪಿಸಿದ ಸ್ಪೀಕರ್‌ ಓಂ ಬಿರ್ಲಾ* ವಾಯು ಮಾಲಿನ್ಯ ನಿಯಂತ್ರಣ ಸ್ಟೇಷನ್‌ ಸ್ಥಾಪನೆ* ಅಕ್ರಮ ಗಣಿಗಾರಿಕೆ ಹಾಗೂ ಅದರಿಂದಾಗುವ ದುಷ್ಪರಿಣಾಮಗಳ ವಿರುದ್ಧ ಗುಡುಗಿದ ಸುಮಲತಾ 

ನವದೆಹಲಿ(ಆ.07): ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ಲೋಕಸಭೆ ಕಲಾಪದಲ್ಲಿ ಅಕ್ರಮ ಗಣಿಗಾರಿಕೆ ಹಾಗೂ ಅದರಿಂದಾಗುವ ದುಷ್ಪರಿಣಾಮಗಳ ವಿರುದ್ಧ ಗುಡುಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶುಕ್ರವಾರದ ಕಲಾಪದ ವೇಳೆ ಸ್ಪೀಕರ್‌ ಓಂ ಬಿರ್ಲಾ ಅವರು ಸುಮಲತಾ ಅವರಿಗೆ ಮಾತನಾಡಲು ಅವಕಾಶ ಕಲ್ಪಿಸಿದರು. ಈ ವೇಳೆ ಮಾತನಾಡಿದ ಸ್ವತಂತ್ರ ಸಂಸದೆ ಸುಮಲತಾ ಅಂಬರೀಶ್‌ ಅವರು, ‘ಗಣಿಗಾರಿಕೆಗಾಗಿ ಭಾರೀ ಪ್ರಮಾಣದ ಸ್ಫೋಟಕಗಳು ಹಾಗೂ ರಾಸಾಯನಿಕಗಳನ್ನು ಬಳಸಲಾಗುತ್ತಿದೆ. ಇದರಿಂದಾಗಿ ಗಣಿ ಪ್ರದೇಶಗಳ ಸುತ್ತಮುತ್ತ ವಾಸಿಸುವವರಲ್ಲಿ ಉಸಿರಾಟ ಸಮಸ್ಯೆ ಹಾಗೂ ಶ್ವಾಸಕೋಶ ಸೇರಿದಂತೆ ಇನ್ನಿತರ ಅನಾರೋಗ್ಯ ಸಮಸ್ಯೆಗಳು ಕಂಡುಬರುತ್ತಿದೆ. ಅಲ್ಲದೆ ಈ ಪ್ರದೇಶಗಳಲ್ಲಿ ಗಾಳಿ ಮತ್ತು ಅಂತರ್ಜಲ ಕಲುಷಿತಗೊಳ್ಳುತ್ತಿದ್ದು, ಬೆಳೆಗಳ ಮೇಲೆಯೂ ದುಷ್ಪರಿಣಾಮವಾಗುತ್ತಿದೆ’ ಎಂದು ಹೇಳಿದ್ದಾರೆ. 

ರಾಜ್ಯಪಾಲರನ್ನು ಭೇಟಿಯಾದ ಸುಮಲತಾ : 30 ದಿನದಲ್ಲಿ ಕ್ರಮದ ಭರವಸೆ

ಈ ಹಿನ್ನೆಲೆಯಲ್ಲಿ ಅಕ್ರಮ ಗಣಿಗಾರಿಕೆ ನಿಯಂತ್ರಣ ಹಾಗೂ ಪರಿಸರದ ರಕ್ಷಣೆಗಾಗಿ ಕೇಂದ್ರ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಕೇಂದ್ರ ಸರ್ಕಾರ ದೇಶಾದ್ಯಂತ ವಾಯು ಮಾಲಿನ್ಯ ನಿಯಂತ್ರಣಕ್ಕಾಗಿ ಒಟ್ಟು 1114 ವಾಯು ಮಾಲಿನ್ಯ ನಿಯಂತ್ರಣ ಸ್ಟೇಷನ್‌ಗಳನ್ನು ಸ್ಥಾಪಿಸಲಾಗಿದೆ ಎಂದಿದೆ.