Asianet Suvarna News Asianet Suvarna News

ಗ್ಯಾಸ್ ಟ್ಯಾಂಕರ್ ಪಲ್ಟಿ: ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರ ಸ್ಥಗಿತ

ಮಂಗಳೂರಿನ ಉಪ್ಪಿನಂಗಡಿ ಬಳಿ ಡ್ರೈವರ್ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು, ಮಂಗಳೂರು ಬೆಂಗಳೂರು ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.ಠಧ

mangalore bangalore high way closed due to gas tanker accident
Author
Mangalore, First Published Dec 2, 2018, 11:03 AM IST

ಮಂಗಳೂರು[ಡಿ.02]: ಉಪ್ಪಿನಂಗಡಿ ಸಮೀಪದ ಮಂಗಳೂರು- ಬೆಂಗಳೂರು ಹೆದ್ದಾರಿಯ ಬೆದ್ರೋಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ, ಅನಿಲ ಸೋರಿಕೆಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹೆದ್ದಾರಿಯನ್ನು ಬಂದ್ ಮಾಡಲಾಗಿದ್ದು, ಅಗ್ನಿಶಾಮಕ ದಳ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ.

ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಈ ಟ್ಯಾಂಕರ್ ಬೆದ್ರೋಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅನಿಲ ಸೊರಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೆದ್ರೋಡಿ ಆಸುಪಾಸಿನ 2 ಕಿ. ಮೀಟರ್ ಪ್ರದೆಶದಲ್ಲಿ ಯಾರೂ ಬೆಂಕಿ ಹಚ್ಚದಂತೆ ಸೂಚನೆ ನೀಡಲಾಗಿದೆ.

ಅಧಿಕಾರಿಗಳು ಕಾರ್ಯಾಚರಣೆ ಮುಂದುವರೆಸಿದ್ದು, ಅನಿಲ ಸೋರಿಕೆ ತಡೆಯಲು ಪ್ರಯತ್ನ ಮುಂದುವರೆದಿದೆ. 

2013ರಲ್ಲಿ ಉಪ್ಪಿನಂಗಡಿಯ ಪೆರ್ನೆ ಸಮೀಪ ಗ್ಯಾಸ್ ಟ್ಯಾಂಕರ್ ಅಪಘಾತದಿಂದಾಗಿ ಬೆಂಕಿ ಹಬ್ಬಿ ಸಾವು ನೋವು ಸಂಭವಿಸಿದ್ದು ಉಲ್ಲೇಖನೀಯ.

Follow Us:
Download App:
  • android
  • ios