*   ಎರಡು ಸಾವಿರಕ್ಕೂ ಅಧಿಕ ನೌಕರರು ಅಮಾನತು*   ಕೋರ್ಟ್‌ ಮೆಟ್ಟಿಲೇರಿದ ಕೆಲವು ನೌಕರರು *   ಸಭೆಯಲ್ಲಿ ನೌಕರರ ಸಮಸ್ಯೆಗಳ ಬಗ್ಗೆ ಚರ್ಚೆ 

ಬೆಂಗಳೂರು(ಸೆ.13): ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡು ಅಮಾನತು, ವಜಾ ಹಾಗೂ ವರ್ಗಾವಣೆ ಒಳಗಾಗಿದ್ದ ನೌಕರರನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ನೌಕರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಇಂದು ಅಧಿಕಾರಿಗಳ ಸಭೆ ಕರೆದಿರುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಸಾರಿಗೆ ಮುಷ್ಕರದ ವೇಳೆ ನಾಲ್ಕು ಸಾರಿಗೆ ನಿಗಮಗಳ ಪೈಕಿ ಸುಮಾರು ಎರಡು ಸಾವಿರಕ್ಕೂ ಅಧಿಕ ನೌಕರರನ್ನು ಅಮಾನತು ಮಾಡಲಾಗಿದೆ. ಹೀಗಾಗಿ ಕೆಲವರು ಕೋರ್ಟ್‌ ಮೆಟ್ಟಿಲೇರಿದ್ದಾರೆ ಎಂದು ಹೇಳಿದ್ದಾರೆ.

ಅತ್ಯಾಚಾರ ಆರೋಪ: ಕೆಎಸ್‌ಆರ್‌ಟಿಸಿ ಮೆಕ್ಯಾನಿಕಲ್‌ ಅಮಾನತು

ಈ ಎಲ್ಲ ವಿಚಾರಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ಇಂದು ಸಭೆ ಕರೆಯಲಾಗಿದೆ ಅಂತ ಸಚಿವ ಶ್ರೀರಾಮುಲು ಅವರು ತಿಳಿಸಿದ್ದಾರೆ.