ಇದರ ಬಗ್ಗೆ ಏನು ಮಾತಾಡಬೇಕೋ ಗೊತ್ತಾಗ್ತಿಲ್ಲ. ಇವೆಲ್ಲ ವಿಚಿತ್ರ, ವಿಕೃತ, ಅಸಹ್ಯಪಡುವ ಪ್ರಕರಣಗಳು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಕಲಬುರಗಿ (ಜೂ.23): ಇದರ ಬಗ್ಗೆ ಏನು ಮಾತಾಡಬೇಕೋ ಗೊತ್ತಾಗ್ತಿಲ್ಲ. ಇವೆಲ್ಲ ವಿಚಿತ್ರ, ವಿಕೃತ, ಅಸಹ್ಯಪಡುವ ಪ್ರಕರಣಗಳು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

Add Asianetnews Kannada as a Preferred SourcegooglePreferred

ಅಸಹಜ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿತರಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣವಾಗಿ ಮಾಧ್ಯಮಗಳು ಕೇಳಿದ ಪ್ರಶ್ನಿಸಿದ ಪ್ರತಿಕ್ರಿಯಿಸಿದ ಅವರು, ಪ್ರಜ್ವಲ್, ಸೂರಜ್, ಯಡಿಯೂರಪ್ಪ ಪ್ರಕರಣ ಆಗಿರಬಹುದು ಯಾರು ಈ ರೀತಿ ಮಾಡಿದ್ದಾರೆ ಅವರಾರಿಗೂ ಏನು ಅನ್ನಿಸಲ್ವ? ಅಸಹ್ಯ, ಮುಜುಗರ ಆಗ್ತಿಲ್ವ? ಅವರು ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ದೊಡ್ಡಮನೆ, ದೊಡ್ಡ ಕುಟುಂಬದವರಿಗೆ ನೀವು ಕೇಳಬೇಕು. ನಾವು ಜವಾಬ್ದಾರಿಯುತ ಕುಟುಂಬದಿಂದ ಬಂದಿರೋದು ಎಂದರು.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ; ಸಾಕ್ಷಿ ಕೊಡಲು ಬಂದು ಪೊಲೀಸರಿಗೆ ತಾನಾಗಿಯೇ ಸಿಕ್ಕಿಬಿದ್ದ ಸೂರಜ್ ರೇವಣ್ಣ!

ಇಂತಹ ಪ್ರಕರಣದಲ್ಲಿ ಬಂಧಿತರಾದರೂ, ಕೋರ್ಟ್‌ಗೆ ಹೋದ್ರೂ ಈ ಕಳಂಕ ಅಳಿಸೋವರೆಗೂ ಅಧಿಕಾರ ಬಿಟ್ಟಿರ್ತೇವೆ ಅಂತಾ ಹೇಳ್ತಾರಾ ಇವರು? ಕುಮಾರಸ್ವಾಮಿ, ದೇವೇಗೌಡ, ರೇವಣ್ಣ ಬಗ್ಗೆ ನಾನು ಮಾತನಾಡೋದಿಲ್ಲ. ಅವರ ಆತ್ಮಸಾಕ್ಷಿಗೆ ತಿಳಿದಂತೆ ಅವರು ಕೆಲಸ ಮಾಡಬೇಕು. ಆದರೆ ಬಿಜೆಪಿಯವರು ಈ ವಿಚಾರದಲ್ಲಿ ಸ್ಮಶಾನ ಮೌನ ಯಾಕೆ ಅಂತಾ ಗೊತ್ತಾಗುತ್ತಿಲ್ಲ. ಉಳಿದ ಟೈಮ್‌ನಲ್ಲಿ ನ್ಯಾಯದ ಬಗ್ಗೆ ಮಾತನಾಡುವ ಬಿಜೆಪಿಯವರು ಸಂವಿಧಾನ ಉಲ್ಲಂಘನೆ , ಕಾನೂನು ಉಲ್ಲಂಘನೆ ಆದಾಗ, ಇಂತಹ ಘಟನೆಗಳು ನಡೆದಾಗ ಮಾತಾಡೋದಿಲ್ಲ ಯಾಕೆ ಎಂದು ಪ್ರಶ್ನಿಸಿದರು.