ದಾವಣಗೆರೆಯ ಹಳೆಪೇಟೆ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಎಂ.ಶಾಮನೂರು ಮತ್ತು ಶ್ರೇಷ್ಠ ಎಂ.ಶಾಮನೂರು ಕೆಂಡ ತುಳಿಯುವ ಮೂಲಕ ಭಕ್ತಿ ಸಮರ್ಪಿಸಿದರು

ದಾವಣಗೆರೆ (ಏ.2): ದಕ್ಷಿಣ ಕ್ಷೇತ್ರದ ಚುನಾವಣೆ ಪ್ರಚಾರ, ಸರಣಿ ಸಭೆಗಳ ಮಧ್ಯೆಯೂ ದಾವಣಗೆರೆಯ ಹಳೆಪೇಟೆ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಎಂ.ಶಾಮನೂರು, ಶ್ರೇಷ್ಠ ಎಂ.ಶಾಮನೂರು ಕೆಂಡ ತುಳಿಯುವ ಮೂಲಕ ಭಕ್ತಿ ಸಮರ್ಪಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದ ಹಳೆಪೇಟೆ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಪ್ರತಿ ವರ್ಷ ಶಾಮನೂರು ಕುಟುಂಬದ ಸದಸ್ಯರು ಕೆಂಡ ಹಾಯುವ ಮೂಲಕ ಭಕ್ತಿ ಸಮರ್ಪಿಸುತ್ತಾ ಬಂದಿದ್ದಾರೆ. ಅದೇ ರೀತಿ ಬುಧವಾರ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗಾಗಿ, ತಮ್ಮ ಪುತ್ರನ ಗೆಲುವಿನ ಹರಕೆ ಹೊತ್ತ ಎಸ್‌.ಎಸ್‌. ಮಲ್ಲಿಕಾರ್ಜುನ ಕೆಂಡ ತುಳಿದರು. ಪುತ್ರಿ ಡಾ.ಶ್ರೇಷ್ಠ ಸಹ ಸಹೋದರ ಸಮರ್ಥನ ಗೆಲುವಿಗಾಗಿ ಕೆಂಡ ತುಳಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ, ಜಾತ್ರೆ ಅಂಗವಾಗಿ ಪ್ರತಿ ವರ್ಷ ತಾವು, ತಮ್ಮ ಕುಟುಂಬ ಸದಸ್ಯರು ಚಿಕ್ಕಂದಿನಿಂದಲೂ ಕೆಂಡ ತುಳಿಯುವ ಮೂಲಕ ಭಕ್ತಿ ಸಮರ್ಪಿಸುತ್ತಿದ್ದೇವೆ. ಇದರಲ್ಲಿ ವಿಶೇಷವೇನೂ ಇಲ್ಲ. ಎಲ್ಲ ಭಕ್ತರಂತೆ ವೀರಭದ್ರೇಶ್ವರ ಸ್ವಾಮಿ ದರ್ಶನವನ್ನೂ ಪಡೆದಿದ್ದೇವೆ ಎಂದರು.