Asianet Suvarna News Asianet Suvarna News

ಸಹಕಾರ ಇಲಾಖೆ ಬಲಗೊಳಿಸಲು ಸಚಿವ ಎಸ್.ಟಿ.ಸೋಮಶೇಖರ್ ಮಹತ್ವದ ನಿರ್ಧಾರ

•    ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಹತ್ವದ ನಿರ್ಧಾರ
•    ಬೇರೆ ಬೇರೆ ಇಲಾಖೆಗಳಲ್ಲಿ ಡೆಪ್ಯುಟೇಷನ್ ಮೇಲಿದ್ದವರ ವಾಪಸ್ ಗೆ ಪತ್ರ
•    ಸಹಕಾರ ಇಲಾಖೆ ಬಲಗೊಳಿಸಲು ಸಚಿವರ ಕ್ರಮ 

minister st somashekar Plan To major changes In Cooperation Dept
Author
Bengaluru, First Published May 24, 2020, 10:08 PM IST

ಬೆಂಗಳೂರು, (ಮೇ.24): ಸಹಕಾರ ಇಲಾಖೆಯಲ್ಲಿ ಈಗ ಮರಳಿ ಮಾತೃ ಸಂಸ್ಥೆಗೆ ಎಂಬ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಗುತ್ತಿದೆ. ಆದರೆ, ಇಲ್ಲಿ ಅಧಿಕಾರಿಗಳೇ ಬಯಸಿ ಬರುತ್ತಿರುವುದಲ್ಲ. ಬದಲಾಗಿ ಸಹಕಾರ ಸಚಿವರು ಇಂಥದ್ದೊಂದು ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದು, ವಿವಿಧ ಇಲಾಖೆಗಳಲ್ಲಿರುವ ಅಧಿಕಾರಿಗಳನ್ನು ಮರಳಿ ಮಾತೃ ಇಲಾಖೆಗೆ ಕರೆತರುವ ನಡೆಯನ್ನು ಇಡಲಾಗಿದೆ.

ಈ ಮೊದಲು ಸಹಕಾರ ಇಲಾಖೆ ಹಾಗೂ ಲೆಕ್ಕ ಪರಿಶೋಧನೆ ಇಲಾಖೆಗೆಂದು ನೇಮಕ ಮಾಡಿಕೊಳ್ಳಲಾಗಿದ್ದರೂ, ಇಲ್ಲಿ ಹೆಚ್ಚಿನ ಕೆಲಸದ ಒತ್ತಡಗಳಿಲ್ಲದ ಕಾರಣ, ಬೇರೆ ಬೇರೆ ಇಲಾಖೆಗಳಿಗೆ ಹಲವರು ಡೆಪ್ಯೂಟ್ ಆದವರೋ ಇಲ್ಲವೇ  ಮಾಡಿಸಿಕೊಂಡೋ ಹೋಗಿ ಕೆಲಸ ಮಾಡುತ್ತಿದ್ದಾರೆ. ಇದರಿಂದ ಇಲಾಖೆಯಲ್ಲಿ ಲೆಕ್ಕಕ್ಕೆ ಹುದ್ದೆಗಳು ಭರ್ತಿಯಾಗಿದ್ದರೂ ಕೆಲಸಕ್ಕೆ ಸಿಬ್ಬಂದಿ ಇಲ್ಲದ ಪರಿಸ್ಥಿತಿಯಂತಾಗಿದೆ.

ಸಿಎಂ ಪರಿಹಾರ ನಿಧಿಗೆ ಒಟ್ಟು 62 ಕೋಟಿ ಸಂಗ್ರಹ, ಅರ್ಧ ಪಾಲು ಸಹಕಾರ ಇಲಾಖೆಯದ್ದು

ಎಲ್ಲೆಲ್ಲಿ ಕಾರ್ಯನಿರ್ವಹಣೆ? 
ಹೀಗೆ ಡೆಪ್ಯೂಟ್ ಮಾಡಿಸಿಕೊಂಡು ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ವಿವಿಧ ಜಿಲ್ಲೆಗಳಲ್ಲಿ ಇರುವ ಕೌಶಲ್ಯಾಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯಿತಿಗಳು ಸೇರಿದಂತೆ ಅನೇಕ ಕಡೆ ಅಧಿಕಾರಿಗಳು ನಿಯೋಜನೆಗೊಂಡಿದ್ದಾರೆ. ಹೀಗೆ ಹೋದವರು ಅಲ್ಲಿಯೇ ಬಹಳಷ್ಟು ವರ್ಷಗಳಿಂದ ಆಯಕಟ್ಟಿನ ಜಾಗದಲ್ಲಿ ನೆಲೆಯೂರಿದ್ದಾರೆ. ಈಗ ಅವರನ್ನು ಪುನಃ ಸಹಕಾರ ಇಲಾಖೆಗೆ ವಾಪಸ್ ಕರೆಸಿಕೊಳ್ಳುವ ಪ್ರಕ್ರಿಯೆಗೆ ಸಚಿವರು ಚಾಲನೆ ನೀಡಿದ್ದಾರೆ.

ಲೆಕ್ಕಕ್ಕೆ ಹುದ್ದೆ ಖಾಲಿ ಇಲ್ಲ, ಕೆಲಸಕ್ಕೆ ಸಿಗಲ್ಲ
ಸಹಕಾರ ಇಲಾಖೆ ಈಗ ಹಿಂದೆಂದಿಗಿಂತಲೂ ಬಹಳ ಚುರುಕಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ, ಈ ಕೆಲದ ಒತ್ತಡಕ್ಕೆ ಸಿಬ್ಬಂದಿ ಸಾಲುತ್ತಿಲ್ಲ. ಹಲವು ಬ್ಯಾಂಕ್ ಗಳಲ್ಲಿ ಸಾಲ ವಸೂಲಾತಿಯ ಸಮಸ್ಯೆಯಾಗುತ್ತಿದೆ. ಜೊತೆಗೆ ಸಮಯಕ್ಕೆ ಸರಿಯಾಗಿ ಕೆಲಸವನ್ನು ಪೂರ್ತಿಗೊಳಿಸಲು ಆಗುತ್ತಿಲ್ಲ. ಹೀಗಾಗಿ ಹಾಕಿಕೊಂಡ ಗುರಿ (ಟಾರ್ಗೆಟ್) ಮುಟ್ಟಲೂ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸುವಾಗ ಈ ವಿಷಯ ಗಮನಕ್ಕೆ ಬಂದಿದೆ. ಇದರಿಂದ ಅಸಮಾಧಾನಗೊಂಡ ಸಚಿವರು, ಹೀಗೆ ಯಾವ ಯಾವ ಕಡೆ ಇಲಾಖೆಯ ಎಷ್ಟೆಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ? ಇಲಾಖೆಯಲ್ಲಿ ಎಲ್ಲೆಲ್ಲಿ ಯಾವ ಯಾವ ಹುದ್ದೆಗಳಿಗೆ ಅತಿ ಅವಶ್ಯಕತೆ ಇದೆ ಎಂಬ ಬಗ್ಗೆ ತಕ್ಷಣ ತಮಗೆ ವರದಿ ಸಲ್ಲಿಸಬೇಕು ಎಂದು ಉನ್ನತ ಅಧಿಕಾರಿಗಳಿಗೆ ಸೂಚಿಸಿದ್ದರು.

ಸಚಿವರಿಂದ ಪತ್ರ
minister st somashekar Plan To major changes In Cooperation Dept

ಸಹಕಾರ ಇಲಾಖೆ ಹಾಗೂ ಲೆಕ್ಕ ಪರಿಶೋಧನಾ ಇಲಾಖೆಯಿಂದ ಉಪ ನಿಬಂಧಕರು, ಉಪ ನಿರ್ದೇಶಕರು, ಜಂಟಿ ನಿಬಂಧಕರು, ಜಂಟಿ ನಿರ್ದೇಶಕರು ಹಾಗೂ ಅಪರ ನಿಬಂಧಕರು, ಅಪರ ನಿರ್ದೇಶಕರು ಹಾಗೂ ಸಚಿವರ ಆಪ್ತ ಕಾರ್ಯದರ್ಶಿ ಹೀಗೆ ಹಲವಾರು ವರ್ಷಗಳಿಂದ ಇನ್ನಿತರ ಇಲಾಖೆಗಳಲ್ಲಿ ನಿಯೋಜನೆಗೊಂಡು ಕಾರ್ಯನಿರ್ವಹಿಸುತ್ತಿದ್ದು, ಇಂಥವರನ್ನು ಕೂಡಲೇ ಮಾತೃ ಇಲಾಖೆಗೆ ಹಿಂದಿರುಗುವಂತೆ ಕ್ರಮ ಕೈಗೊಳ್ಳಬೇಕೆಂದು ಸಚಿವ ಎಸ್. ಟಿ. ಸೋಮಶೇಖರ್ ಅವರು ಪತ್ರದಲ್ಲಿ ಕೋರಿದ್ದಾರೆ.

ಮುಖ್ಯಮಂತ್ರಿಗಳ ಸಹಮತ

minister st somashekar Plan To major changes In Cooperation Dept
 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಹಕಾರ ಇಲಾಖೆ ಸಭೆ ನಡೆಸಿದ ಸಂದರ್ಭದಲ್ಲಿ ಸಚಿವ ಸೋಮಶೇಖರ್ ಅವರು, ಇಲಾಖೆಯ ಸಿಬ್ಬಂದಿ ಬೇರೆಡೆ ನಿಯೋಜನೆಗೊಂಡಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ತಕ್ಷಣವೇ ಕ್ರಮ ಕೈಗೊಂಡು ಮಾತೃ ಇಲಾಖೆ ಸೇವೆಗೆ ಬಳಸಿಕೊಳ್ಳಿ ಎಂದು ಸೂಚಿಸಿದ್ದರು. 

 “ಸಹಕಾರ”ಕ್ಕೆ ಬಲ
ಸಹಕಾರ ಸಚಿವರ ಈ ದಿಟ್ಟ ನಡೆಯಿಂದ ಸಹಕಾರ ಇಲಾಖೆಗೆ ಮತ್ತಷ್ಟು ಬಲ ಬರುವುದರಲ್ಲಿ ಯಾವುದೇ ಸಂಶಯ ಇಲ್ಲ. ಸರ್ಕಾರಗಳಲ್ಲಿ ಇಂತಹ ಹಲವಾರು ಲೋಪದೋಷಗಳು ಕಾಣಸಿಗುತ್ತವೆ. ಆದರೆ, ಅವುಗಳನ್ನು ಪತ್ತೆ ಹಚ್ಚಿ ಕಾರ್ಯರೂಪಕ್ಕೆ ತರುವ ಕೆಲಸ ಆಗಬೇಕಿದೆ. ಆದರೆ, ಆ ಕೆಲಸವನ್ನು ಈಗ ಸಚಿವ ಸೋಮಶೇಖರ್ ಅವರು ಮಾಡಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಸಹಕಾರ ವಲಯದ ತಜ್ಞರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಎಸ್.ಟಿ.ಸೋಮಶೇಖರ್ ಹೇಳುವುದೇನು....?
minister st somashekar Plan To major changes In Cooperation Dept

ನಾನು ಈಚೆಗೆ ವಿಕಾಸಸೌಧದ ಕಚೇರಿಯಲ್ಲಿ ಸಹಕಾರ ಇಲಾಖೆಯ ಉನ್ನತಾಧಿಕಾರಿಗಳ ಸಭೆ ಕರೆದಿದ್ದೆ. ಆ ವೇಳೆ, ನಮ್ಮಲ್ಲಿ ಸಾಕಷ್ಟು ಸಿಬ್ಬಂದಿ ನೇಮಕವಾಗಿದ್ದರೂ ಬೇರೆ ಬೇರೆ ಇಲಾಖೆಯಲ್ಲಿ ಡೆಪ್ಯುಟೇಷನ್ ಮೇಲೆ ಕಾರ್ಯನಿರ್ವಹಿಸುತ್ತಿರುವುದರ ಬಗ್ಗೆ ಗಮನಕ್ಕೆ ಬಂತು. ನಮ್ಮ ಇಲಾಖೆಯಲ್ಲಿಯೇ ಸಾಕಷ್ಟು ಕೆಲಸಗಳು ಬಾಕಿ ಇರುವಾಗ ಹೇಗೆ ಅವರನ್ನು ಡೆಪ್ಯುಟೇಷನ್ ಮೂಲಕ ಕಳುಹಿಸಲಾಗಿದೆಯೋ ಅರ್ಥವಾಗಿಲ್ಲ. ಈ ನಿಟ್ಟಿನಲ್ಲಿ ಇಲಾಖೆಯನ್ನು ಬಲಗೊಳಿಸಬೇಕಿದ್ದು, ಅವರನ್ನೆಲ್ಲ ವಾಪಸ್ ಕರೆಸಿಕೊಳ್ಳಲು ಪತ್ರ ಬರೆದಿದ್ದೇನೆ. ಇದಕ್ಕೆ ಮುಖ್ಯಮಂತ್ರಿಗಳು ಸಹ ಸಹಮತ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕ್ರಮಗಳನ್ನು ತೆಗೆದುಕೊಂಡು ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವೆ ಎಂದು ಹೇಳಿದ್ದಾರೆ.

Follow Us:
Download App:
  • android
  • ios