ಡಿಕೆ ಶಿವಕುಮಾರ್ ಅವರ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿಕೆಯನ್ನು ಟೀಕಿಸುತ್ತಿರುವ ಕಾಂಗ್ರೆಸ್ ನಾಯಕರನ್ನು ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ. ಕಾಂಗ್ರೆಸ್‌ಗೆ ಹಿಂದೂಗಳ ಬಗ್ಗೆ ದ್ವೇಷವಿದ್ದು, ಅದಕ್ಕಾಗಿಯೇ ಅವರ ಉದ್ಧಾರವಾಗಿಲ್ಲ ಎಂದು ಕಿಡಿಕಾರಿದ್ದಾರೆ. ಖರ್ಗೆ ಕುಟುಂಬದ ಹಿಂದೂ ವಿರೋಧಿ ಹೇಳಿಕೆಗಳನ್ನೂ ಖಂಡಿಸಿದ್ದಾರೆ.

ಹುಬ್ಬಳ್ಳಿ (ಫೆ.27): ಡಿಕೆ ಶಿವಕುಮಾರ್ ನಿಮ್ಮ ತತ್ವದ ವಿರುದ್ಧ ಇದ್ರೆ ಅವರನ್ನು ಸಸ್ಪೆಂಡ್ ಮಾಡಿ ನೋಡೋಣ ಎಂದು ಸಂಸದ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷದ ವಿರುದ್ಧ ಗುಡುಗಿದ್ದಾರೆ.

Add Asianetnews Kannada as a Preferred SourcegooglePreferred

ಡಿಸಿಎಂ ಡಿಕೆ ಶಿವಕುಮಾರ್ ಅವರು ಮಹಾಕುಂಭಮೇಳ, ಮಹಾಶಿವರಾತ್ರಿಯಂದು ಕೊಯಮತ್ತೂರಿನ ಧಾರ್ಮಿಕ ಕಾರ್ಯಕ್ರಮ ಭಾಗಿಯಾಗಿರುವುದು ಕಾಂಗ್ರೆಸ್ ನಾಯಕರಿಂದ ಟೀಕೆ ವ್ಯಕ್ತವಾಗುತ್ತಿರುವ ಹಿನ್ನೆಲೆ ಈ ವಿಚಾರವಾಗಿ ಮಾತನಾಡಿದ ಸಂಸದರು, ಡಿಕೆ ಶಿವಕುಮಾರ ಕುಂಭಮೇಳ, ಕೊಯಮತ್ತೂರಿಗೆ ಹೋಗಿರೋದು ಸಹಜ. ಇದರಲ್ಲೇನು ದೊಡ್ಡಸ್ತಿಕೆ ಇಲ್ಲ ಎಂದರು.

ಇದನ್ನೂ ಓದಿ: DK Shivakumar ವಿರುದ್ಧ ಸುನೀಲ್ ಬೋಸ್ ಪರೋಕ್ಷ ಅಸಮಾಧಾನ | Suvarna News | Kannada News

ಕಾಂಗ್ರೆಸ್‌ಗೆ ಹಿಂದೂಗಳ ಬಗ್ಗೆ ದ್ವೇಷವಿದೆ:

ಡಿಕೆ ಶಿವಕುಮಾರ್ ಸಹಜವಾಗಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಕ್ಕೆ ಕಾಂಗ್ರೆಸ್ ನಾಯಕರು ಟೀಕಿಸುತ್ತಿದ್ದಾರೆ. ಅವರು ಹೋಗಿದ್ದ ಸರಿಯಲ್ಲವೆಂದರೆ, ತಮ್ಮ ಪಕ್ಷದ ತತ್ವಗಳಿಗೆ ವಿರುದ್ಧವಾಗಿದ್ದರೆ ಅವರನ್ನು ಸಸ್ಪೆಂಡ್ ಮಾಡಿ. ಪಾರ್ಟಿಯಿಂದ ಹೊರಗೆ ಹಾಕಿ ನೋಡೋಣ. ಈ ಕಾಂಗ್ರೆಸ್‌ಗೆ ಹಿಂದೂಗಳ ಬಗ್ಗೆ ದ್ವೇಷವಿದೆ. ಇದರಿಂದಾಗಿಯೇ ಕಾಂಗ್ರೆಸ್ ಉದ್ಧಾರವಾಗಿಲ್ಲ, ಮುಂದೆನೂ ಆಗೋಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ:'ಅಧಿಕಾರ ನಶ್ವರ, ಮತದಾರನೇ ಈಶ್ವರ..' ಯಾಸೀರ್ ಖಾನ್‌ಗೆ ಮತ ನೀಡುವಂತೆ ಡಿಕೆ ಶಿವಕುಮಾರ ಮನವಿ

ಖರ್ಗೆ ಕುಟುಂಬದ ವಿರುದ್ಧ ಕಿಡಿ:

ಹಿಂದೂಗಳು ಇಲ್ಲದೆ ನೀವು ರಾಜಕಾರಣ ಮಾಡ್ತೀವಿ ಅಂದ್ರೆ ಅದು ನಿಮ್ಮ ಹಣೆಬರಹ. ಹಿಂದೂಗಳನ್ನು ಕೀಳಾಗಿ ಕಾಣೋದ್ರಿಂದಲೇ ನಿಮ್ಮ ಅವನತಿಗೆ ಕಾರಣ. ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಹೇಳಿಕೆಗಳು ಹಿಂದೂ ವಿರೋಧಿಯಾಗಿವೆ. ಈ ದೇಶ ಹಿಂದೂಗಳ ದೇಶ, ಹಿಂದೂ ರಾಷ್ಟ್ರ ಅನ್ನೋ ಪರಂಪರೆ ಇದೆ. ಇದಕ್ಕೆ ಎಲ್ಲಿ ಅಡ್ಡಿಯಾಗಬಾರದು. ಕಮ್ಯುನಿಷ್ಟರೂ ಕೂಡ ಹಿಂದೂ ದೇವಾಲಯಕ್ಕೆ ಹೋಗಿದ್ದಾರೆ. ಕಾಂಗ್ರೆಸ್‌ನ ಎಷ್ಟು ಜನ ಕುಂಭಮೇಳಕ್ಕೆ ಹೋಗಿಲ್ಲ? ರಾಜಕಾರಣಕ್ಕೆ ಧರ್ಮ ಥಳಕು ಹಾಕಬಾರದು ಎಂದು ಪರೋಕ್ಷವಾಗಿ ಖರ್ಗೆ ವಿರುದ್ದ ಹರಿಹಾಯ್ದರು.