Asianet Suvarna News Asianet Suvarna News

ನಾಗಮಂಗಲ ಕೋಮುಗಲಭೆ ಪ್ರಕರಣ; ರಾಜ್ಯದ ಗೃಹಮಂತ್ರಿಯ ಉಡಾಫೆ ಹೇಳಿಕೆಗೆ ಸಂಸದ ಕೋಟ ಕಿಡಿ

ರಾಜ್ಯದ ಗೃಹಸಚಿವ ಜಿ.ಪರಮೇಶ್ವರ್ ಅವರು ರಾಜ್ಯದಲ್ಲಿ ಗಲಾಟೆ ದೊಂಬಿ ನಡೆದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತಾರೆ ಎಂದು ನಂಬಿದ್ದೆವು. ಆದರೆ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಮತಾಂಧರು ಕಲ್ಲು ತೂರಿ ಹಿಂದೂ ಭಕ್ತರ ಅಂಗಡಿಗಳಿಗೆ ಬೆಂಕಿ ಇಟ್ಟಿದ್ದರೂ, ಆಕಸ್ಮಿಕವಾಗಿ ಕಲ್ಲು ಹೊಡೆದಿದ್ದಾರೆ, ಗಾಳಿಯಲ್ಲಿ ಕಲ್ಲು ಬಂತು ಎಂದು ಗೃಹಮಂತ್ರಿ ಹೇಳುತ್ತಿದ್ದಾರೆ. 

mp shrinivas poojary spark against home minister stats about nagamangala violence rav
Author
First Published Sep 14, 2024, 3:41 PM IST | Last Updated Sep 14, 2024, 3:41 PM IST

ಉಡುಪಿ (ಸೆ.14) : ರಾಜ್ಯದ ಗೃಹಸಚಿವ ಜಿ.ಪರಮೇಶ್ವರ್ ಅವರು ರಾಜ್ಯದಲ್ಲಿ ಗಲಾಟೆ ದೊಂಬಿ ನಡೆದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತಾರೆ ಎಂದು ನಂಬಿದ್ದೆವು. ಆದರೆ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಮತಾಂಧರು ಕಲ್ಲು ತೂರಿ ಹಿಂದೂ ಭಕ್ತರ ಅಂಗಡಿಗಳಿಗೆ ಬೆಂಕಿ ಇಟ್ಟಿದ್ದರೂ, ಆಕಸ್ಮಿಕವಾಗಿ ಕಲ್ಲು ಹೊಡೆದಿದ್ದಾರೆ, ಗಾಳಿಯಲ್ಲಿ ಕಲ್ಲು ಬಂತು ಎಂದು ಗೃಹಮಂತ್ರಿ ಹೇಳುತ್ತಿದ್ದಾರೆ. 

ಗಣೇಶ ಭಕ್ತರನ್ನೇ ಆರೋಪಿಗಳನ್ನಾಗಿ ಮಾಡಿದ್ದಾರೆ. ಇದು ಕಾಂಗ್ರೆಸಿನ ಓಲೈಕೆ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕಿಡಿಕಾರಿದರು.

ಮುಸ್ಲಿಂರ ಕೈಯಿಂದ ಪೆಟ್ರೋಲ್ ಬಾಂಬ್, ತಲ್ವಾರ್ ಕಿತ್ತುಕೊಳ್ಳಿ; ಇಲ್ಲದಿದ್ರೆ ನಾವೂ ಹಿಡಿಯುತ್ತೇವೆ: ಪ್ರತಾಪ್ ಸಿಂಹ

ಶುಕ್ರವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗಮಂಗಲದಲ್ಲಿ ಗಣೇಶನನ್ನು ಕೂರಿಸಿದವರನ್ನು ಎ1 ಆರೋಪಿಯನ್ನಾಗಿ ಮಾಡಲಾಗಿದೆ. ಕಲ್ಲು ಹೊಡೆದವರು ಅಮಾಯಕರು ಮತ್ತು ಅಸಹಾಯಕರು ಎಂದರೆ ಇದು ಯಾವ ನ್ಯಾಯ? ಕತ್ತಿ, ಗುರಾಣಿ ಹಿಡಿದು ಕೊಂಡವರನ್ನು ರಕ್ಷಣೆ ಮಾಡಲು ಸರ್ಕಾರದ ಹೊರಟಿದೆ ಎಂದವರು ಆತಂಕ ವ್ಯಕ್ತಪಡಿಸಿದರು.ಹಿಂದುಗಳ ಹಬ್ಬವನ್ನು ಕಾಂಗ್ರೆಸ್ ನಿಯಂತ್ರಣ ಮಾಡಲು ಹೊರಟಿದ್ದು, ಅಗೋಚರವಾದ ಕಾರ್ಯತಂತ್ರ ರೂಪಿಸಲಾಗಿದೆ. ಗಣೇಶೋತ್ಸವಕ್ಕೆ ಹಲವು ನಿರ್ಬಂಧಗಳನ್ನು ಹಾಕಿ, ಮೆರವಣಿಗೆ ಮತ್ತು ಧ್ವನಿವರ್ಧಕಗಳಿಗೆ ಸರ್ಕಾರ ನಿಯಂತ್ರಣ ಹಾಕಿದ್ದೆ ಇದಕ್ಕೆ ಸಾಕ್ಷಿ ಎಂದರು.

 

ನಾಗಮಂಗಲ ಕೋಮುಗಲಭೆ ಪ್ರಕರಣ:  ಗೃಹಸಚಿವರ ಉಡಾಫೆ ಹೇಳಿಕೆಗೆ ಬಿಕೆ ಹರಿಪ್ರಸಾದ್ ಆಕ್ಷೇಪ

ಸರ್ಕಾರದ ಒಂದೊಂದು ನಿಲುವು ಸಂಶಯ ಹುಟ್ಟಿಸುತ್ತಿದೆ. ಬಹುಸಂಖ್ಯಾತರಿಂದ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯವನ್ನು ನಾವು ಲೋಕದಲ್ಲಿ ಕೇಳಿದ್ದೇವೆ. ಆದರೆ ಕರ್ನಾಟಕದಲ್ಲಿ ಅಲ್ಪಸಂಖ್ಯಾತರು, ಬಹುಸಂಖ್ಯಾತರನ್ನು ಬದುಕಲು ಆಗದ ಪರಿಸ್ಥಿತಿ ನಿರ್ಮಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರವೇ ಅವರಿಗೆ ರಕ್ಷಣೆ ಕೊಡುತ್ತಿದೆ ಎಂದವರು ಆರೋಪಿಸಿದರು.

Latest Videos
Follow Us:
Download App:
  • android
  • ios