ಕಾಂಗ್ರೆಸ್ ಶಾಸಕ ಮಹೇಶ್ ಕುಮಠಳ್ಳಿಗೆ ಕೊಲೆ ಬೆದರಿಕೆ ಒಡ್ಡಲಾಗಿದೆ. ಈ ರೀತಿಯ ವಿಡಿಯೋ ಒಂದು ಎಲ್ಲೆಡೆ ವೈರಲ್ ಆಗಿದೆ.
ಅಥಣಿ: ಒಂದೊಮ್ಮೆ ಕ್ಷೇತ್ರದ ಮತದಾರರಿಗೆ ಮೋಸ ಮಾಡಿ ಬಿಜೆಪಿ ಸೇರಿದರೆ ಅಥವಾ ಅವರಿಗೆ ಬೆಂಬಲ ನೀಡಿದರೆ ಶಾಸಕ ಮಹೇಶ್ ಕುಮಠಳ್ಳಿ ಅವರನ್ನು ಕೊಲೆ ಮಾಡುವುದಾಗಿ ಕುಡಿದ ಮತ್ತಿನಲ್ಲಿ ವ್ಯಕ್ತಿಗಳಿಬ್ಬರು ಬೆದರಿಕೆ ಹಾಕಿದ್ದು, ಇದೀಗ ಆ ವಿಡಿಯೋ ವೈರಲ್ ಆಗಿದೆ.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ ರಾತ್ರಿ ಕುಡಿದ ಅಮಲಿನಲ್ಲಿ ವ್ಯಕ್ತಿಗಳಿಬ್ಬರು ಈ ಬೆದರಿಕೆ ಹಾಕಿದ್ದು, ವಿಡಿಯೋ ಸಾಮಾಜಿಕ ತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.
ವಿಡಿಯೋದಲ್ಲಿರುವವರನ್ನು ಅಥಣಿ ತಾಲೂಕಿನ ಬುರ್ಲಟ್ಟಿಗ್ರಾಮದ ಸಂಜೀವ ಯಳ್ಳೂರ ಮತ್ತು ಬಸವರಾಜ ಖೋತ ಎಂದು ಹೇಳಲಾಗಿದ್ದು, ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 11, 2019, 10:41 AM IST