* ಈ ಬಾರಿಯು ಸರಳ ದಸರ ಆಚರಣೆಗೆ ಸರ್ಕಾರ ಚಿಂತನೆ * ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟನೆ* ಹೆಚ್.ಡಿ.ಕೋಟೆ ತಾಲ್ಲೂಕು ಬಾವಲಿ ಚೆಕ್‌ಪೋಸ್ಟ್‌ ಪರಿಶೀಲನೆ ವೇಳೆ ಹೇಳಿಕೆ

ಮೈಸೂರು, (ಆ.07): ಮೈಸೂರು ದಸರಾ ಮಹೋತ್ಸವವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ವರ್ಷವೂ ದಸರಾ ಆಚರಣೆ ಮಾಡಲಾಗುತ್ತದೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. 

Add Asianetnews Kannada as a Preferred SourcegooglePreferred

 ಇಂದು (ಶನಿವಾರ) ಹೆಚ್.ಡಿ.ಕೋಟೆ ತಾಲ್ಲೂಕು ಬಾವಲಿ ಚೆಕ್‌ಪೋಸ್ಟ್‌ ಪರಿಶೀಲನೆ ವೇಳೆ ದಸರಾ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕೊರೋನಾ ಹಿನ್ನೆಲೆಯಲ್ಲಿ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿಯೂ ಸರಳವಾಗಿ ಆಚರಿಸಲು ಚಿಂತಿಸಲಾಗಿದೆ ಎಂದರು.

ರಾಜ್ಯ​ದಲ್ಲಿ ಸರಳ ದಸರಾ : ಆದ ವೆಚ್ಚ ಎಷ್ಟು..?

ಸರಳ ದಸರ ಆಚರಣೆಗೆ ರೂಪರೇಷೆಗಳನ್ನು ಸಿದ್ದಪಡಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ರೂಪರೇಷೆ ಸಿದ್ದವಾದ ನಂತರ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಳೆದ ವರ್ಷ ದಸರಾ ಆಚರಣೆಗೆ 10 ಕೋಟಿ ರೂ. ಮಂಜೂರು ಮಾಡಲಾಗಿತ್ತು. ಆ ಪೈಕಿ 7.50 ಕೋಟಿ ಅನುದಾನ ಉಳಿದಿದೆ. ಈ ವರ್ಷದ ದಸರಾ ಆಚರಣೆಗೆ ಸರ್ಕಾರದ ಅನುಮೋದನೆ ಪಡೆದು ಆ ಉಳಿಕೆ ಅನುದಾನ ಬಳಸಿಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.