ಹವಾಮಾನ ಇಲಾಖೆಯು ಮೈಸೂರು ದಸರಾ ಜಂಬൂಸವಾರಿಯ ದಿನದಂದು ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ದಸರಾ ಸಂಭ್ರಮಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಯಿಂದಾಗಿ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

ಮೈಸೂರು: ದಸರಾ ಜಂಬೂಸವಾರಿಯ ಸಂಭ್ರಮಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ ಇಂದು ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ವ್ಯಕ್ತವಾಗಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಭಾಗಗಳಲ್ಲೂ ಗಾಳಿಯೊಂದಿಗೆ ಜೋರಾಗಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಯೂ ಇಂದು ದಿನಪೂರ್ತಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ನಗರದ ಜನತೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Add Asianetnews Kannada as a Preferred SourcegooglePreferred

ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಮೈಸೂರು ಹೊರತುಪಡಿಸಿ ಕೊಡಗು, ಹಾಸನ, ಶಿವಮೊಗ್ಗ, ಕಲ್ಬುರ್ಗಿ, ಬೀದರ್ ಹಾಗೂ ಬೆಳಗಾವಿ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಆ ಭಾಗಗಳಲ್ಲೂ ಮಳೆಯ ತೀವ್ರತೆ ಹೆಚ್ಚುವ ನಿರೀಕ್ಷೆ ಇದೆ

ದಸರಾ ಸಂಭ್ರಮದ ನಡುವೆ ಚಿಂತನೆ

ದಸರಾ ಸಂಭ್ರಮಕ್ಕೆ ಮೈಸೂರು ಸಜ್ಜಾಗಿರುವಾಗಲೇ ಹವಾಮಾನ ಇಲಾಖೆಯ ಮುನ್ಸೂಚನೆ ಚಿಂತೆಗೆ ಕಾರಣವಾಗಿದೆ. ಮಳೆ ಜೋರಾಗಿದ್ದರೆ ದಸರಾ ಜಂಬೂಸವಾರಿಯ ಕಾರ್ಯಕ್ರಮಕ್ಕೆ ಅಡ್ಡಿ ಉಂಟಾಗುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸಜ್ಜಾಗಿದ್ದಾರೆ. ಹವಾಮಾನ ಇಲಾಖೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ವರ್ತಿಸಲು ಸಲಹೆ ನೀಡಲಾಗಿದೆ.