ತಾಂತ್ರಿಕ ದೋಷದಿಂದ ಪೀಣ್ಯ ನಿಲ್ದಾಣದಲ್ಲಿ ಮೆಟ್ರೋ ರೈಲು ಕೆಟ್ಟು ನಿಂತಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ. ಬೆಳಗ್ಗೆ 10 ಗಂಟೆಯ ವೇಳೆಗೆ ರೈಲು ಕೆಟ್ಟು ನಿಂತಿದ್ದು ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಬೆಂಗಳೂರು (ಡಿ.15): ತಾಂತ್ರಿಕ ದೋಷದಿಂದ ಪೀಣ್ಯ ನಿಲ್ದಾಣದಲ್ಲಿ ಮೆಟ್ರೋ ರೈಲು ಕೆಟ್ಟು ನಿಂತಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ. ಬೆಳಗ್ಗೆ 10 ಗಂಟೆಯ ವೇಳೆಗೆ ರೈಲು ಕೆಟ್ಟು ನಿಂತಿದ್ದು ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸದ್ಯ ಯಶವಂತಪುರ – ಸಿಲ್ಕ್ ಇನ್‌ಸ್ಟಿಟ್ಯೂಟ್‌ ವರೆಗೆ ಮಾತ್ರ ಮೆಟ್ರೋ ಸಂಚಾರ ನಡೆಸುತ್ತಿದ್ದು ಪೀಣ್ಯ – ನಾಗಸಂದ್ರ ರೈಲು ಸಂಚಾರ ಸ್ಥಗಿತಗೊಂಡಿದೆ. ಮುಂದಿನ 2 ಗಂಟೆಯ ಒಳಗಡೆ ತಾಂತ್ರಿಕ ದೋಷವನ್ನು ಸರಿಪಡಿಸಲಾಗುವುದು ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಚಾಲಕ ರಹಿತ ನಮ್ಮ ಮೆಟ್ರೋ ರೈಲು ಆರಂಭಕ್ಕೆ ತಯಾರಿ, ಚೀನಾದ ಎಂಜಿನೀಯರ್ಸ್‌ಗೆ ಭಾರತ ವೀಸಾ!

ಮೆಟ್ರೋ ಸ್ಥಗಿತದಿಂದಾಗಿ ಪ್ರಯಾಣಿಕರು ಪರದಾಟವನ್ನು ಅನುಭವಿಸಿದರು. ಸದ್ಯ ಯಶವಂತಪುರ – ಸಿಲ್ಕ್ ಇನ್ಸ್ಟಿಟ್ಯೂಟ್‌ವರಗೆ ಮಾತ್ರ ಮೆಟ್ರೋ ಸಂಚಾರಿಸುತ್ತಿದೆ. ನಾಗಸಂದ್ರದಿಂದ ಯಶವಂತಪುರ ಹಾಗೂ ಯಶವಂತಪುರದಿಂದ ನಾಗಸಂದ್ರದ ಎರಡು ಕಡೆಯಿಂದಲೂ ಮೆಟ್ರೋ ರೈಲು ಸಂಚಾರವಿಲ್ಲ. ಹೀಗಾಗಿ ಮೆಟ್ರೋ ರೈಲಿಗಾಗಿ ಕಾದು ಪ್ರಯಾಣಿಕರು ಸಂಚಾರವಿಲ್ಲದೆ ವಾಪಸ್‌ ಆಗುತ್ತಿದ್ದಾರೆ. ಬೆಳಗ್ಗೆ 10:18ಕ್ಕೆ ರೈಲು ಹಳಿಯಲ್ಲಿ ಕಾಣಿಸಿಕೊಂಡ ಸಮಸ್ಯೆಯಿಂದ ಮೆಟ್ರೋ ಓಡಾಟದಲ್ಲಿ ವ್ಯತ್ಯಯ ಉಂಟಾಗಿದೆ. ಗಂಭೀರ ಸಮಸ್ಯೆ ಏನಿಲ್ಲ ಶೀಘ್ರವೇ ಸೇವೆ ಆರಂಭಿಸುತ್ತೇವೆ ಎಂದಿದ್ದಾರೆ.

ನಮ್ಮ ಮೆಟ್ರೋದಲ್ಲಿ ಸಮಸ್ಯೆ ಆಯ್ತಾ? ತುರ್ತು ಎಚ್ಚರಿಕೆ ಗಂಟೆ ಬಳಸಿ