* ನಂಜನಗೂಡು ಹುಚ್ಚಗಣಿ ಮಹದೇವಮ್ಮ ದೇವಸ್ಥಾನ ತೆರವುಗೊಳಿಸಿದ್ದ ತಹಶೀಲ್ದಾರ್​ ತಲೆದಂಡ* ನಂಜನಗೂಡು ತಹಶೀಲ್ದಾರ್ ಮೋಹನ್ ಕುಮಾರಿ ವರ್ಗಾವಣೆ* ವರ್ಗಾವಣೆ ಮಾಡಿ ಕಂದಾಯ ಇಲಾಖೆ ಆದೇಶ

ಬೆಂಗಳೂರು, (ಸೆ.27): ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಎನ್ನುವಂತೆ ನಂಜನಗೂಡಿನ ಹುಚ್ಚಗಣಿ ಮಹದೇವಮ್ಮ ದೇವಸ್ಥಾನ (Temple) ತೆರವು ಪ್ರಕರಣದಲ್ಲಿ ತಹಶೀಲ್ದಾರ್‌ಗೆ ಶಿಕ್ಷೆಯಾಗಿದೆ. 

Add Asianetnews Kannada as a Preferred SourcegooglePreferred

ಹೌದು...ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿ ಅವರನ್ನು ವರ್ಗಾವಣೆ ಆದೇಶ ಹೊರಡಿಸಲಾಗಿದೆ. ವರ್ಗಾವಣೆ (transfe) ಮಾಡಿ ಕಂದಾಯ ಇಲಾಖೆ ಇಂದು (ಸೆ.27) ಆದೇಶ ಹೊರಡಿಸಲಾಗಿದೆ. 

'IAS ಅಧಿಕಾರಿಗಳನ್ನು ಜ್ಞಾನಿಗಳು ಅಂತೀವಿ, ಆದ್ರೆ ಸುಪ್ರೀಂ ಆದೇಶವನ್ನು ಅರ್ಥೈಸ್ಕೊಳೋಕೆ ಬರಲ್ಲ'

ನಂಜನಗೂಡು ತಹಶೀಲ್ದಾರ್​ ಹುದ್ದೆಯನ್ನು ಸರ್ಕಾರ ಖಾಲಿ ಉಳಿಸಿದೆ. ಸೂಕ್ತ ಪ್ರಭಾರ ವ್ಯವಸ್ಥೆ ಮಾಡುವಂತೆ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್​ಗೆ ಸೂಚನೆ ನೀಡಲಾಗಿದೆ.

ಹುಚ್ಚಗಣಿ ಮಹದೇವಮ್ಮ ದೇವಾಲಯ ತೆರವು ವಿಚಾರಕ್ಕೆ ಸಂಬಂಧಿಸಿ ಕರ್ನಾಟಕದ ವಿವಿಧ ಕಡೆಗಳಲ್ಲಿ ಪ್ರತಿಭಟನೆಗಳು ನಡೆದಿದ್ದವು. ರಾಜ್ಯದಲ್ಲಿ ಅಧಿಕಾರದಲ್ಲಿ ಇರುವ ಬಿಜೆಪಿ ಪಕ್ಷದ ಹಲವು ನಾಯಕರು ಕೂಡ ಘಟನೆಗೆ ವಿರೋಧ ವ್ಯಕ್ತಪಡಿಸಿದ್ದರು.

ಮೈಸೂರು ದೇಗುಲ ಧ್ವಂಸ : ಅಧಿಕಾರಿಗಳ ತಲೆದಂಡ ಶೀಘ್ರ?

ಕೋರ್ಟ್ ಆದೇಶವಿದೆ ಎಂದು ದೇವಸ್ಥಾನ ತೆರವು ಮಾಡುವಂತೆ ಮೇಲಿಂದ ದೊಡ್ಡ ಅಧಿಕಾರಿ ಆದೇಶ ಹೊರಡಿಸಿದ್ದಾರೆ. ಅದರಂತೆ ನಂಜನಗೂಡಿನ ತಹಶೀಲ್ದಾರ್ ಮೋಹನ ಕುಮಾರಿ ಅವರು ಹುಚ್ಚಗಣಿ ಮಹದೇವಮ್ಮ ದೇವಸ್ಥಾನವನ್ನು ತೆರವು ಮಾಡಿಸಿದ್ದಾರೆ.

ಆದ್ರೆ, ಶಿಕ್ಷೆಗೆ ಗುರಿಯಾಗಿದ್ದು ಮಾತ್ರ ತಹಶೀಲ್ದಾರ್​. ದೇಗುಲ ತೆರವು ಮಾಡುವಂತೆ ಸೂಚಿಸಿದ ಇನ್ನುಳಿದ ಅಧಿಕಾರಿಗಳಿಗೆ ಯಾವ ಶಿಕ್ಷೆ ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಒಟ್ಟಿನಲ್ಲಿ ಹುಚ್ಚಗಣಿ ಮಹದೇವಮ್ಮ ದೇವಾಲಯ ತೆರವಿಗೆ ಮೇಲೆ ಕೂತು ಸೂಚನೆ ಕೊಟ್ಟ ಅಧಿಕಾರಿಗಳು ಬಚಾವ್ ಆಗುವ ಮೂಲಕ ಪ್ರಕರಣ ಸುಖಾಂತ್ಯ ಕಂಡಂತಾಗಿದೆ.