* ನಂಜನಗೂಡು ಹುಚ್ಚಗಣಿ ಮಹದೇವಮ್ಮ ದೇವಸ್ಥಾನ ತೆರವುಗೊಳಿಸಿದ್ದ ತಹಶೀಲ್ದಾರ್​ ತಲೆದಂಡ* ನಂಜನಗೂಡು ತಹಶೀಲ್ದಾರ್ ಮೋಹನ್ ಕುಮಾರಿ ವರ್ಗಾವಣೆ* ವರ್ಗಾವಣೆ ಮಾಡಿ ಕಂದಾಯ ಇಲಾಖೆ ಆದೇಶ

ಬೆಂಗಳೂರು, (ಸೆ.27): ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಎನ್ನುವಂತೆ ನಂಜನಗೂಡಿನ ಹುಚ್ಚಗಣಿ ಮಹದೇವಮ್ಮ ದೇವಸ್ಥಾನ (Temple) ತೆರವು ಪ್ರಕರಣದಲ್ಲಿ ತಹಶೀಲ್ದಾರ್‌ಗೆ ಶಿಕ್ಷೆಯಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೌದು...ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿ ಅವರನ್ನು ವರ್ಗಾವಣೆ ಆದೇಶ ಹೊರಡಿಸಲಾಗಿದೆ. ವರ್ಗಾವಣೆ (transfe) ಮಾಡಿ ಕಂದಾಯ ಇಲಾಖೆ ಇಂದು (ಸೆ.27) ಆದೇಶ ಹೊರಡಿಸಲಾಗಿದೆ. 

'IAS ಅಧಿಕಾರಿಗಳನ್ನು ಜ್ಞಾನಿಗಳು ಅಂತೀವಿ, ಆದ್ರೆ ಸುಪ್ರೀಂ ಆದೇಶವನ್ನು ಅರ್ಥೈಸ್ಕೊಳೋಕೆ ಬರಲ್ಲ'

ನಂಜನಗೂಡು ತಹಶೀಲ್ದಾರ್​ ಹುದ್ದೆಯನ್ನು ಸರ್ಕಾರ ಖಾಲಿ ಉಳಿಸಿದೆ. ಸೂಕ್ತ ಪ್ರಭಾರ ವ್ಯವಸ್ಥೆ ಮಾಡುವಂತೆ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್​ಗೆ ಸೂಚನೆ ನೀಡಲಾಗಿದೆ.

ಹುಚ್ಚಗಣಿ ಮಹದೇವಮ್ಮ ದೇವಾಲಯ ತೆರವು ವಿಚಾರಕ್ಕೆ ಸಂಬಂಧಿಸಿ ಕರ್ನಾಟಕದ ವಿವಿಧ ಕಡೆಗಳಲ್ಲಿ ಪ್ರತಿಭಟನೆಗಳು ನಡೆದಿದ್ದವು. ರಾಜ್ಯದಲ್ಲಿ ಅಧಿಕಾರದಲ್ಲಿ ಇರುವ ಬಿಜೆಪಿ ಪಕ್ಷದ ಹಲವು ನಾಯಕರು ಕೂಡ ಘಟನೆಗೆ ವಿರೋಧ ವ್ಯಕ್ತಪಡಿಸಿದ್ದರು.

ಮೈಸೂರು ದೇಗುಲ ಧ್ವಂಸ : ಅಧಿಕಾರಿಗಳ ತಲೆದಂಡ ಶೀಘ್ರ?

ಕೋರ್ಟ್ ಆದೇಶವಿದೆ ಎಂದು ದೇವಸ್ಥಾನ ತೆರವು ಮಾಡುವಂತೆ ಮೇಲಿಂದ ದೊಡ್ಡ ಅಧಿಕಾರಿ ಆದೇಶ ಹೊರಡಿಸಿದ್ದಾರೆ. ಅದರಂತೆ ನಂಜನಗೂಡಿನ ತಹಶೀಲ್ದಾರ್ ಮೋಹನ ಕುಮಾರಿ ಅವರು ಹುಚ್ಚಗಣಿ ಮಹದೇವಮ್ಮ ದೇವಸ್ಥಾನವನ್ನು ತೆರವು ಮಾಡಿಸಿದ್ದಾರೆ.

ಆದ್ರೆ, ಶಿಕ್ಷೆಗೆ ಗುರಿಯಾಗಿದ್ದು ಮಾತ್ರ ತಹಶೀಲ್ದಾರ್​. ದೇಗುಲ ತೆರವು ಮಾಡುವಂತೆ ಸೂಚಿಸಿದ ಇನ್ನುಳಿದ ಅಧಿಕಾರಿಗಳಿಗೆ ಯಾವ ಶಿಕ್ಷೆ ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಒಟ್ಟಿನಲ್ಲಿ ಹುಚ್ಚಗಣಿ ಮಹದೇವಮ್ಮ ದೇವಾಲಯ ತೆರವಿಗೆ ಮೇಲೆ ಕೂತು ಸೂಚನೆ ಕೊಟ್ಟ ಅಧಿಕಾರಿಗಳು ಬಚಾವ್ ಆಗುವ ಮೂಲಕ ಪ್ರಕರಣ ಸುಖಾಂತ್ಯ ಕಂಡಂತಾಗಿದೆ.