ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಐದು ವರ್ಷದ ಆದ್ಯಾಳ ಚಿಕಿತ್ಸೆಗೆ ಹಣ ಹೊಂದಿಸಲು ದೊಡ್ಡಮ್ಮ ಸೆರಗೊಡ್ಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆದ್ಯಾ ಮೃತಪಟ್ಟಿದ್ದಾಳೆ.

ನಂಜನಗೂಡು (ಸೆ.13): ಬೈಕ್‌ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಗುವನ್ನು ಉಳಿಸಿಕೊಳ್ಳಲು ಹಣಕ್ಕಾಗಿ ಭಿಕ್ಷೆ ಬೇಡಿ ಹೋರಾಟ ಮಾಡಿದ್ದ ದೊಡ್ಡಮ್ಮನ ಪ್ರಯತ್ನ ವಿಫಲವಾಗಿದೆ. 

Add Asianetnews Kannada as a Preferred SourcegooglePreferred

ಎರಡು ಬೈಕ್‌ಗಳ ನಡುವೆ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಡತಲೆ ಗ್ರಾಮದ ಬಾಲಕಿ ಆದ್ಯಾ (5) ಶುಕ್ರವಾರ ಮೈಸೂರಿನ ಕೆ.ಆರ್‌.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. 

ಇದನ್ನೂ ಓದಿ: ಸಣ್ಣ ಜ್ವರಕ್ಕೆ 82 ಲಕ್ಷ ಬಿಲ್‌: ಮಗಳ ನೋಡಲು ಕೆನಡಾಗೆ ಹೋಗಿದ್ದ ಮಹಿಳೆಗೆ ಆಘಾತ

ಈಕೆಯನ್ನು ಮೊದಲು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಆಸ್ಪತ್ರೆಯು ಚಿಕಿತ್ಸೆಗಾಗಿ ಒಂದೂವರೆ ಲಕ್ಷ ರು. ಬಿಲ್‌ ಮಾಡಿತ್ತು. ಇದನ್ನು ಕಟ್ಟಲು ಆದ್ಯಾಳ ದೊಡ್ಡಮ್ಮ ಮಂಗಳಮ್ಮ ತನ್ನ ಗ್ರಾಮದಲ್ಲಿ ಸೆರಗೊಡ್ಡಿ ಹಣ ಹೊಂದಿಸಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬಳಿಕ ಆಸ್ಪತ್ರೆಯು ಕೇವಲ ₹25000 ಶುಲ್ಕ ಪಡೆದಿತ್ತು. ಬಳಿಕ ಕುಟುಂಬಸ್ಥರು ಮಗುವನ್ನು ಕೆ.ಆರ್‌.ಆಸ್ಪತ್ರೆಗೆ ದಾಖಲಿಸಿ ಬದುಕಿಸಲು ಪ್ರಯತ್ನಿಸಿದ್ದರು. ಆದರೆ ಮಗು ಬದುಕಿಳಿಯಲಿಲ್ಲ. ಆದ್ಯಾಳ ತಂದೆ ಇನ್ನೂ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.