2020ರ ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರಕಟಿಸಲಾಗಿದ್ದು, ಕರ್ನಾಟಕದ ಇಬ್ಬರು ಸೇರಿ ಒಟ್ಟು 47 ಮಂದಿ ಶಿಕ್ಷಕರಿಗೆ ಪ್ರಶಸ್ತಿ ಲಭಿಸಿದೆ. 

ನವದೆಹಲಿ (ಆ.22): 2020ರ ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರಕಟಿಸಲಾಗಿದ್ದು, ಕರ್ನಾಟಕದ ಇಬ್ಬರು ಸೇರಿ ಒಟ್ಟು 47 ಮಂದಿ ಶಿಕ್ಷಕರಿಗೆ ಪ್ರಶಸ್ತಿ ಲಭಿಸಿದೆ. 

Add Asianetnews Kannada as a Preferred SourcegooglePreferred

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ‘ನಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ಯ ಶಿಕ್ಷಕ ಯಾಕೂಬ್‌.ಎಸ್‌ ಹಾಗೂ ಕಲಬುರಗಿ ಜಿಲ್ಲೆಯ ಅಫ್ಜಲ್‌ಪುರ ತಾಲೂಕಿನ ‘ಬಂದರವಾಡ ಹಿರಿಯ ಪ್ರಾಥಮಿಕ ಶಾಲೆ’ಯ ಶಿಕ್ಷಕಿ ಸುರೇಖಾ ಜಗನ್ನಾಥ್‌ ಅವರಿಗೆ ಈ ಗೌರವ ಲಭಿಸಿದೆ. ಕೇಂದ್ರ ಶಿಕ್ಷಣ ಸಚಿವಾಲಯ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ವಿಜೇತರನ್ನು ಆಯ್ಕೆ ಮಾಡಿದೆ.

ಸಮೀಕ್ಷೆಯಿಂದ ಬಯಲಾಯ್ತು ಆನ್‌ಲೈನ್ ಶಿಕ್ಷಣದ ಅಸಲಿ ಮುಖ: ವಿದ್ಯಾರ್ಥಿಗಳಿಗೆ ತುಂಬಲಾರದ ನಷ್ಟ!..

ದೇಶದ ಎಲ್ಲಾ ರಾಜ್ಯ, ಕೇಂದ್ರಾಡಳಿತ ಪ್ರದೇಶ ಹಾಗೂ ಸಂಸ್ಥೆಗಳಿಂದ ಒಟ್ಟು 153 ಶಿಕ್ಷಕರ ಹೆಸರನ್ನು ಶಿಫಾರಸ್ಸು ಮಾಡಲಾಗಿದ್ದು, ಈ ಪೈಕಿ ಆಯ್ಕೆ ಸಮಿತಿ 47 ಶಿಕ್ಷಕರ ಹೆಸರನ್ನು ಅಂತಿಮಗೊಳಿಸಿದೆ. ಪ್ರತೀ ಬಾರಿ ಸೆ.5ರ ಶಿಕ್ಷಕರ ದಿನದಂದು ಈ ಪ್ರಶಸ್ತಿ ನೀಡಲಾಗುತ್ತಿದ್ದು, ಈ ವರ್ಷದ ಬಗ್ಗೆ ಯಾವುದೇ ಮಾಹಿತಿ ಇಲ್ಲ.