ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಹೊಸ ವರ್ಷ ಮತ್ತು ಸಂಬಂಧಿತ ಆಚರಣೆಗಳ ಸಂದರ್ಭದಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಮಂಗಳವಾರ ಹೇಳಿದರು.

ಬೆಂಗಳೂರು (ಡಿ.26): ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಹೊಸ ವರ್ಷ ಮತ್ತು ಸಂಬಂಧಿತ ಆಚರಣೆಗಳ ಸಂದರ್ಭದಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಮಂಗಳವಾರ ಹೇಳಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯ ರಾಜಧಾನಿ ಬೆಂಗಳೂರು ಮಾತ್ರವಲ್ಲದೆ ಮೈಸೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿಯಂತಹ ಎರಡನೇ ಶ್ರೇಣಿಯ ನಗರಗಳಲ್ಲಿಯೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ರಾಜ್ಯಾದ್ಯಂತ ಈ ಬಗ್ಗೆ ಪೊಲೀಸರು ಸಲಹೆಗಳನ್ನು ನೀಡಲಿದ್ದಾರೆ ಎಂದು ಅವರು ಹೇಳಿದರು.

ಬಂಗಾರಪ್ಪ ಪುಣ್ಯಸ್ಮರಣೆ: ಬಿಜೆಪಿ ನಾಯಕರ ವಿರುದ್ಧವೇ ಮಾಜಿ ಸಚಿವ ಅರವಿಂದ ಲಿಂಬಾವಳಿ ವಾಗ್ದಾಳಿ!

'ಹೊಸ ವರ್ಷಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ, ಈಗಾಗಲೇ ಪೊಲೀಸ್, ಆರೋಗ್ಯ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ವಿದ್ಯುತ್ ಮತ್ತು ಅಬಕಾರಿ ಇಲಾಖೆಗಳಂತಹ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಆಯಾ ಇಲಾಖೆಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದ್ದೇನೆ' ಎಂದು ಪರಮೇಶ್ವರ ಹೇಳಿದರು.