ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ನ.22 ರಿಂದ 24 ರವರೆಗೆ ಮಳೆಯಾಗುವ ಸಾದ್ಯತೆ 

ಬೆಂಗಳೂರು(ನ.22): ಮೈಕೊರೆಯುವ ಚಳಿಯ ನಡುವೆ ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ನ.22 ರಿಂದ 24 ರವರೆಗೆ ಮಳೆಯಾಗುವ ಸಾದ್ಯತೆ ಇದೆ. 

Add Asianetnews Kannada as a Preferred SourcegooglePreferred

ಕರಾವಳಿ, ದಕ್ಷಿಣ ಒಳನಾಡಿನ ಅನೇಕ ಕಡೆ, ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಮಳೆ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಅಲರ್ಟ್‌ ಘೋಷಿಸಿದೆ. 

ತಗ್ಗಿದ ಮಳೆ: ರಾಜ್ಯದಲ್ಲೀಗ ಮೈ ಕೊರೆಯುವಷ್ಟು ಚಳಿ!

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ.