ಅರಾಫತ್‌ನ ಕಳೆದ ಸೆ.14ರಂದು ಕೀನ್ಯಾದಿಂದ ಆಗಮಿಮಿಸಿದ ವೇಳೆ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದರು. ಇದಲ್ಲದೇ ಇದೇ ಪ್ರಕರಣ ಸಂಬಂಧ ಮಾಝ್ ಮುನೀರ್ ಅಹ್ಮದ್ ಹಾಗೂ ಮೊಹಮ್ಮದ್ ಶರೀಕ್ ವಿರುದ್ಧವೂ ಆರೋಪಪಟ್ಟಿ ದಾಖಲಿಸಿದೆ.

ನವದೆಹಲಿ(ಮಾ.09): ಶಿವಮೊಗ್ಗ ಐಸಿಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು ಘೋಷಿತ ಉಗ್ರ ಅರಾಫತ್ ಅಲಿ ವಿರುದ್ಧ ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಸಿದೆ. ಅದರಲ್ಲಿ 2020ರಲ್ಲಿ ಮಂಗಳೂರಿನಲ್ಲಿ ಐಸಿಸ್ ಮತ್ತು ಲಷ್ಕ‌ರ್ ಎ ತೊಯ್ದಾ ಪರವಾಗಿ ಗೋಡೆ ಬರಹ ಬರೆಯಲು ನೆರವು ನೀಡಿದ ವಿಷಯ ಪ್ರಸ್ತಾಪಿಸಲಾಗಿದೆ.

Add Asianetnews Kannada as a Preferred SourcegooglePreferred

ಅರಾಫರ್, ಕೆಲ ಯುವಕರನ್ನು ಮತೀಯವಾದಕ್ಕೆ ಸೆಳೆದು ಅವರ ಮೂಲಕ ಮಂಗಳೂರಿನಲ್ಲಿ ಗೋಡೆ ಬರಹ ಬರೆಸಿದ್ದ. ಪ್ರಕರಣದಲ್ಲಿ ನಾಪತ್ತೆಯಾಗಿರುವ ಅಬ್ದುಲ್ ಮಥೀನ್ ತಾಹ ಮತ್ತು ಮಸ್ಲವೀರ್ ಹುಸ್ಸೇನ್ ಶಹಜೇಬ್‌ನ ಸೂಚನೆಯಂತೆ ಅರಾ ಫರ್ ಈ ಕೆಲಸ ಮಾಡಿದ್ದ. ಶಾರಿಖ್ ಅಹಮದ್‌ ಎಂಬಾತನ ಮೂಲಕ ಈ ಗೋಡೆ ಬರಹ ಬರೆಸಿದ್ದ. ಗೋಡೆ ಬರಹ ಬರೆದವರಿಗೆ ವಿದೇಶಗಳಿಂದ ಸ್ವೀಕರಿಸಿದ ಕ್ರಿಸ್ಟೋಕರೆನ್ಸಿ ಹಣವನ್ನು ಬಳಸಿಕೊಂಡು ಹಣ ಪಾವತಿಸಿದ್ದ ಎಂದು ಎನ್‌ಐಎ ಆರೋಪಿಸಿದೆ.

ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಪಾಕಿಸ್ತಾನ್, ಐಸಿಸ್‌ಗೂ‌ ಲಿಂಕ್‌ ಇದೆ: ಬಸನಗೌಡ ಪಾಟೀಲ್ ಯತ್ನಾಳ್‌

ಅರಾಫತ್‌ನ ಕಳೆದ ಸೆ.14ರಂದು ಕೀನ್ಯಾದಿಂದ ಆಗಮಿಮಿಸಿದ ವೇಳೆ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದರು. ಇದಲ್ಲದೇ ಇದೇ ಪ್ರಕರಣ ಸಂಬಂಧ ಮಾಝ್ ಮುನೀರ್ ಅಹ್ಮದ್ ಹಾಗೂ ಮೊಹಮ್ಮದ್ ಶರೀಕ್ ವಿರುದ್ಧವೂ ಆರೋಪಪಟ್ಟಿ ದಾಖಲಿಸಿದೆ.