ಶಿವಮೊಗ್ಗ ಉಗ್ರನ ಸುಳಿವಿತ್ತರೆ 3 ಲಕ್ಷ ಬಹುಮಾನ| -ಎನ್‌ಐಎನಿಂದ ಘೋಷಣೆ| ಅಬ್ದುಲ್‌ ಮಥೀನ್‌ಗೆ ಶೋಧ| ಈತ ಐಸಿಸ್‌ನಿಂದ ಪ್ರೇರಿತವಾಗಿ ಉಗ್ರ ಸಂಘಟನೆ ಕಟ್ಟಿದ ಆರೋಪ

ನವದೆಹಲಿ(ಮೇ.14): ಜಗತ್ತಿನ ಕುಖ್ಯಾತ ಉಗ್ರ ಸಂಘಟನೆಗಳಲ್ಲಿ ಒಂದಾಗಿರುವ ಐಸಿಸ್‌ನಿಂದ ಪ್ರೇರಣೆಗೊಂಡು ಬೆಂಗಳೂರಿನಲ್ಲಿ ಉಗ್ರ ಸಂಘಟನೆ ಕಟ್ಟಿದ ಪ್ರಕರಣದಲ್ಲಿ ಆರೋಪಿಯಾಗಿರುವ ಶಿವಮೊಗ್ಗ ಮೂಲದ ಯುವಕನ ಕುರಿತು ಸುಳಿವು ನೀಡಿದವರಿಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) 3 ಲಕ್ಷ ರು. ಬಹುಮಾನ ಘೋಷಣೆ ಮಾಡಿದೆ.

Add Asianetnews Kannada as a Preferred SourcegooglePreferred

ಶಿವಮೊಗ್ಗದ ಅಬ್ದುಲ್‌ ಮಥೀನ್‌ (26) ಎಂಬಾತನ ವಿರುದ್ಧ ಭಾರತೀಯ ದಂಡ ಸಂಹಿತೆ ಹಾಗೂ ಅಕ್ರಮ ಚಟುವಟಿಕೆ (ತಡೆ) ಕಾಯ್ದೆಯಡಿ ಎನ್‌ಎಐ ಪ್ರಕರಣ ದಾಖಲಿಸಿದೆ. ಆತ ತಲೆಮರೆಸಿಕೊಂಡಿರುವುದರಿಂದ ಬಂಧನ ಸಾಧ್ಯವಾಗುತ್ತಿಲ್ಲ. ಹೀಗಾಗಿ ಆತನ ಬಂಧನಕ್ಕೆ ಕಾರಣವಾಗುವಂತಹ ಸುಳಿವು ನೀಡಿದವರಿಗೆ 3 ಲಕ್ಷ ರು. ನೀಡುವುದಾಗಿ ಬುಧವಾರ ಪ್ರಕಟಿಸಿದೆ.

ದಾವೂದ್‌ ಜೊತೆಗೂಡಿ ಭಾರತದಲ್ಲಿ ದಾಳಿಗೆ ಲಷ್ಕರ್‌ ಉಗ್ರ ಸಂಚು!

Scroll to load tweet…

ಯಾರು ಈತ?:

ಮೆಹಬೂಬ್‌ ಪಾಷಾ, ಖಾಜಾ ಮೊಯಿದ್ದೀನ್‌ ಹಾಗೂ ಆತನ ಸಹಚರರು ತಮಿಳುನಾಡಿನ ಹಿಂದು ಸಂಘಟನೆಯ ನಾಯಕರೊಬ್ಬರನ್ನು ಹತ್ಯೆ ಮಾಡಿದ್ದರು. ಇದೇ ತಂಡ ಐಸಿಸ್‌ನಿಂದ ಪ್ರೇರಣೆ ಪಡೆದು ಅಲ್‌- ಹಿಂದ್‌ ಐಸಿಸ್‌ ಸಂಘಟನೆಯನ್ನು ಬೆಂಗಳೂರಿನಲ್ಲಿ ಕಟ್ಟಿತ್ತು. 2019ರಲ್ಲಿ ಬೆಂಗಳೂರಿನ ಗುರಪ್ಪನಪಾಳ್ಯದ ತನ್ನ ನಿವಾಸದಲ್ಲಿ ಪಾಷಾ ಹಲವಾರು ಸಭೆಗಳನ್ನು ನಡೆಸಿದ್ದ. ಯುವಕರನ್ನು ನೇಮಕ ಮಾಡಿಕೊಂಡು, ಮೂಲಭೂತವಾದಿಗಳನ್ನಾಗಿಸಿ, ಭಯೋತ್ಪಾದಕ ಚಟುವಟಿಕೆ ನಡೆಸುವುದು ಹಾಗೂ ಆಷ್ಘಾನಿಸ್ತಾನ/ಸಿರಿಯಾದಲ್ಲಿನ ಐಸಿಸ್‌ಗೆ ಸೇರಿಸುವುದು ಈ ಗ್ಯಾಂಗ್‌ನ ಉದ್ದೇಶ ಆಗಿತ್ತು.

ಭಾರತೀಯ ಸೇನಾ ಗುಂಡಿಗೆ ಹಿಜ್ಬುಲ್ ಕಮಾಂಡರ್ ಬಲಿ; ಕಾಶ್ಮೀರದಲ್ಲಿ ಇಂಟರ್ನೆಟ್ ಸ್ಥಗಿತ!

ಈ ಪ್ರಕರಣ ಸಂಬಂಧ ಪಾಷಾ, ಸಲೀಮ್‌ ಖಾನ್‌, ಮೊಹಮ್ಮದ್‌ ಝೈದ್‌ ಎಂಬುವರು ಸೇರಿ 12 ಮಂದಿಯ ಬಂಧನವಾಗಿತ್ತು. ಸಲೀಂ ಹಾಗೂ ಝೈದ್‌ ಮೂಲಕ ಪಾಷಾ ಸಂಪರ್ಕಕ್ಕೆ ಮಥೀನ್‌ ಬಂದಿದ್ದ. ಆನ್‌ಲೈನ್‌ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ. ಆದರೆ ಆತ ತಲೆಮರೆಸಿಕೊಂಡಿದ್ದಾನೆ ಎಂದು ಎನ್‌ಐಎ ತಿಳಿಸಿದೆ.