Asianet Suvarna News Asianet Suvarna News

ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ ಕೊಟ್ಟ ಸಾರಿಗೆ ಸಚಿವ ಶ್ರೀರಾಮುಲು

* ಬಸ್ ಪ್ರಯಾಣಿಕರಿಗೆ ಗುಡ್‌ ನ್ಯೂಸ್ ಕೊಟ್ಟ ಸಾರಿಗೆ ಸಚಿವ 
* ಅಧಿಕಾರಿಗಳ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ಶ್ರೀರಾಮುಲು
* ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸ್ಪಷ್ಟನೆ

No proposal for bus fare hike says Transport Minister Sriramulu rbj
Author
Bengaluru, First Published Aug 14, 2021, 9:29 PM IST

ಬೆಂಗಳೂರು, (ಆ.14):  ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಪ್ರತಿಯೊಂದು ವಸ್ತುವಿನ ಬೆಲೆ ಹೆಚ್ಚಳವಾಗಿದೆ.   

ಅದರಂತೆ ಬಸ್ ಪ್ರಯಾಣ ದರವನ್ನು ಏರಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ, ಸದ್ಯಕ್ಕೆ ಪ್ರಯಾಣ ದರ ಏರಿಕೆ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಸ್ವತಃ ಸಾರಿಗೆ ಸಚಿವ ಶ್ರೀರಾಮುಲು ಅವರೇ ಸ್ಪಷ್ಟಪಡಿಸಿದ್ದಾರೆ.

ರಿಕ್ಷಾ, ಬಸ್‌ ಚಾಲಕರು ಆಕಸ್ಮಿಕವಾಗಿ ಮೃತಪಟ್ಟರೆ 5 ಲಕ್ಷ ರೂ ಪರಿಹಾರ: ಸಚಿವ ಹೆಬ್ಬಾರ್‌

ಈ ಬಗ್ಗೆ ಇಂದು (ಆ.14) ಸಾರಿಗೆ ಇಲಾಖೆಯ ಅಧಿಕಾರಿಗಳ ಜತೆ ಸಭೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಮುಲು,ಶೇಕಡಾ 70 ರಷ್ಟು ಜನರು ಬಸ್ ಮೇಲೆ ಅವಲಂಬಿಸಿದ್ದಾರೆ, ಹೀಗಾಗಿ, ಸದ್ಯಕ್ಕೆ ಬಸ್​ ದರ ಹೆಚ್ಚಳ ಮಾಡಿ ಜನರಿಗೆ ಹೊರೆ ಮಾಡಲ್ಲ. ಹಳೇ ಬಸ್​ ಸ್ಕ್ರಾಪ್​ ನೀತಿಯನ್ನೇ ಪಾಲಿಸುತ್ತೀನಿ ಎಂದು ಸ್ಪಷ್ಟನೆ ನೀಡಿದರು. 

 ಹಿರಿಯ ಅಧಿಕಾರಿಗಳೊಂದಿಗೆ ಸಾರಿಗೆ ಇಲಾಖೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಸಾರಿಗೆ ಇಲಾಖೆ ಈ ಸಾಲಿನಲ್ಲಿ 510.24 ಕೋಟಿ ರೂಪಾಯಿ ನಷ್ಟದಲ್ಲಿದೆ. ನಷ್ಟದಲ್ಲಿರುವ ಸಾರಿಗೆ ಸಂಸ್ಥೆಯನ್ನು ಲಾಭದತ್ತ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.

ಈ ಕಳೆದ ಬಿಎಸ್‌ವೈ ಸರ್ಕಾರದ ಅವಧಿಯಲ್ಲಿ ಅಂದಿನ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಕ್ಕೆ ಕೈಹಾಕಿದ್ರು. ಆದ್ರೆ, ಸಿಎಂ ಬದಲಾವಣೆ ಆಗಿದ್ದರಿಂದ ಅದು ಸಾಧ್ಯವಾಗಲಿಲ್ಲ.

Follow Us:
Download App:
  • android
  • ios