ಹಗರಣದಿಂದ ತಮ್ಮನ್ನು ಬಚಾವ್‌ ಮಾಡಲು ಸಿಐಡಿ ಅಧಿಕಾರಿ ಶಂಕರಗೌಡರಿಗೆ 76 ಲಕ್ಷ ರು.ಗಳನ್ನು ತನ್ನ ಅಳಿಯ ಶ್ರೀಕಾಂತನ ಮೂಲಕ ನೀಡಿದ್ದೇನೆ. ಬ್ಯಾಂಕ್‌ ಆಫ್‌ ಬರೋಡಾ ಮೂಲಕ ಈ ಹಣ ಡ್ರಾ ಮಾಡಲಾಗಿದೆ ಎಂದು ಆರ್‌ಡಿ ಪಾಟೀಲ್‌ ಆಡಿಯೋದಲ್ಲಿ ಹೇಳಿಕೆ ನೀಡಿ ಅದನ್ನು ಸೋಷಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ ಮಾಡಿದ್ದ.

ಕಲಬುರಗಿ(ಜ.28):  ಪಿಎಸ್‌ಐ ಹಗರಣದ ಕಿಂಗ್‌ಪಿನ್‌ ಆರ್‌ಡಿ ಪಾಟೀಲ್‌, ಆತನ ಅಳಿಯ ಶೀಕಾಂತ ಊಡಗಿಯವರ ಬ್ಯಾಂಕ್‌ ಖಾತೆಗಳಲ್ಲಿ 2022ರ ಜು.1 ರಿಂದ ಡಿಸೆಂಬರ್‌ 31ರ ವರೆಗಿನ 6 ತಿಂಗಳ ಅವಧಿಯಲ್ಲಿ ಯಾವುದೇ ಹಣದ ವಹಿವಾಟು ನಡೆದಿಲ್ಲ ಎಂದು ಕಲಬುರಗಿ ಸೂಪರ್‌ ಮಾರ್ಕೆಟ್‌ ಮುಖ್ಯರಸ್ತೆಯಲ್ಲಿರುವ ಬ್ಯಾಂಕ್‌ ಆಫ್‌ ಬರೋಡಾ ಮುಖ್ಯಶಾಖೆಯ ಮ್ಯಾನೇಜರ್‌, ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.

Add Asianetnews Kannada as a Preferred SourcegooglePreferred

ಹಗರಣದಿಂದ ತಮ್ಮನ್ನು ಬಚಾವ್‌ ಮಾಡಲು ಸಿಐಡಿ ಅಧಿಕಾರಿ ಶಂಕರಗೌಡರಿಗೆ 76 ಲಕ್ಷ ರು.ಗಳನ್ನು ತನ್ನ ಅಳಿಯ ಶ್ರೀಕಾಂತನ ಮೂಲಕ ನೀಡಿದ್ದೇನೆ. ಬ್ಯಾಂಕ್‌ ಆಫ್‌ ಬರೋಡಾ ಮೂಲಕ ಈ ಹಣ ಡ್ರಾ ಮಾಡಲಾಗಿದೆ ಎಂದು ಆರ್‌ಡಿ ಪಾಟೀಲ್‌ ಆಡಿಯೋದಲ್ಲಿ ಹೇಳಿಕೆ ನೀಡಿ ಅದನ್ನು ಸೋಷಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ ಮಾಡಿದ್ದ.

PSI Recruitment Scam: ಎಸ್‌ಐ ಕೇಸ್‌ ವಿಚಾರಣೆಯಿಂದ ಸಿಜೆ ಪೀಠ ಹಿಂದಕ್ಕೆ

ಈ ಹಿನ್ನೆಲೆಯಲ್ಲಿ ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲರು, ಬ್ಯಾಂಕ್‌ ಆಫ್‌ ಬರೋಡಾಕ್ಕೆ ಪತ್ರ ಬರೆದು, ಆರ್‌ಡಿಪಿ ಹಾಗೂ ಆತನ ಅಳಿಯ ಶ್ರೀಕಾಂತನ ಖಾತೆಗಳ ಹಣಕಾಸು ವಹಿವಾಟಿನ ಮಾಹಿತಿ ಕೋರಿದ್ದರು. ಈ ಕೋರಿಕೆ ಹಿನ್ನೆಲೆಯಲ್ಲಿ ಬ್ಯಾಂಕ್‌ ಆಫ್‌ ಬರೋಡಾದ ಮ್ಯಾನೇಜರ್‌, ಸಿಐಡಿ ಕಚೇರಿಗೆ ಪತ್ರ ಬರೆದಿದ್ದು, ಬ್ಯಾಂಕ್‌ ಆಫ್‌ ಬರೋಡಾದಲ್ಲಿ ರುದ್ರಗೌಡ ಪಾಟೀಲ್‌ ಹೆಸರಲ್ಲಿ 2 ಹಾಗೂ ಅವರ ಅಳಿಯ ಶ್ರೀಕಾಂತ ಸಿದ್ದರಾಮ ಊಡಗಿ ಹೆಸರಲ್ಲಿ ಎರಡು...ಹೀಗೆ ನಾಲ್ಕು ಬ್ಯಾಂಕ್‌ ಖಾತೆಗಳಿವೆ. 2022ರ ಮೇ ತಿಂಗಳ 19 ರಿಂದಲೇ ಸಿಐಡಿ ಕೋರಿಕೆ ಮೇರೆಗೆ ಈ ಖಾತೆಗಳು ಫ್ರೀಜ್‌ ಆಗಿವೆ. ಹೀಗಾಗಿ ಈ ಖಾತೆಗಳಿಂದ ಹಣಕಾಸಿನ ವಹಿವಾಟು ನಡೆದಿಲ್ಲ ಎಂದು ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.