ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಈ ಮಾರ್ಗಕ್ಕೆ ನಾನ್ ಎಸಿ ಬಸ್ ಸೇವೆ ಆರಂಭವಾಗಲಿದೆ.
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು-ಪಾಂಡಿಚೇರಿ ಮಾರ್ಗದಲ್ಲಿ ಮಾ.1 ರಿಂದ ನಾನ್ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ನಿರ್ಧರಿಸಿದೆ.
ಬೆಂಗಳೂರಿನಿಂದ ರಾತ್ರಿ 9 ಗಂಟೆಗೆ ಹೊರಟು ಮುಂಜಾನೆ 4 ಗಂಟೆಗೆ ಪಾಂಡಿಚೇರಿ ತಲುಪಲಿದೆ.
ಅಲ್ಲಿಂದ ರಾತ್ರಿ 10.45 ಹೊರಟು ಮುಂಜಾನೆ 5.30ಕ್ಕೆ ಬೆಂಗಳೂರು ಸೇರಲಿದೆ. ಕೃಷ್ಣಗಿರಿ, ತಿರುವಣಾಮಲೈ ಮಾರ್ಗದ ಮೂಲಕ ಪಾಂಡಿಚೇರಿ ತಲುಪಲಿದೆ. ಪ್ರಯಾಣ ದರ ವಯಸ್ಕರಿಗೆ 600 ರು. ನಿಗದಿ ಪಡಿಸಲಾಗಿದೆ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 17, 2019, 9:34 AM IST