ಉಚಿತ ಬಸ್‌ ಪ್ರಯಾಣದ ಶಕ್ತಿಗೆ 1 ವರ್ಷ: 225 ಕೋಟಿ ಸ್ತ್ರೀಯರಿಂದ ಪ್ರಯಾಣ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪೈಕಿ ಮೊದಲು ಅನುಷ್ಠಾನಗೊಂಡ (2023 ಜೂ. 11) ಶಕ್ತಿ ಯೋಜನೆ ಭರ್ಜರಿ ಯಶಸ್ವಿಯಾಗಿದೆ. ಕಳೆದೊಂದು ವರ್ಷದಲ್ಲಿ ಯೋಜನೆ ಅಡಿ 225.15 ಕೋಟಿ ಮಹಿಳಾ ಪ್ರಯಾಣಿಕರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಸಾಮಾನ್ಯ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಹೀಗೆ ಮಹಿಳಾ ಪ್ರಯಾಣಿಕರ ಉಚಿತ ಪ್ರಯಾಣದ ವೆಚ್ಚವನ್ನು ನಿಗಮಗಳಿಗೆ ರಾಜ್ಯ ಸರ್ಕಾರ ಭರಿಸುತ್ತಿದ್ದು, ಜೂನ್ 9ರವರೆಗೆ ಒಟ್ಟು 5481.40 ಕೋಟಿ ರು.ಗಳನ್ನು ನೀಡಲಾಗಿದೆ. 

One Year Complete for Shakti Scheme in Karnataka grg

ಬೆಂಗಳೂರು(ಜೂ.11):  ರಾಜ್ಯದ ಮಹಿಳಾ ಸಬಲೀಕರಣ ಉದ್ದೇಶದೊಂದಿಗೆ ರಾಜ್ಯ ಸರ್ಕಾರ ಜಾರಿಗೊಳಿಸಿದ ಶಕ್ತಿ ಯೋಜನೆ ಒಂದು ವರ್ಷ ಪೂರೈಸಿದೆ. ಯೋಜನೆ ಅಡಿಯಲ್ಲಿ ಜೂನ್ 9 ರವರೆಗೆ 225.15 ಕೋಟಿ ಮಹಿಳಾ ಪ್ರಯಾಣಿಕರು ಲಾಭ ಪಡೆದಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪೈಕಿ ಮೊದಲು ಅನುಷ್ಠಾನಗೊಂಡ (2023 ಜೂ. 11) ಶಕ್ತಿ ಯೋಜನೆ ಭರ್ಜರಿ ಯಶಸ್ವಿಯಾಗಿದೆ. ಕಳೆದೊಂದು ವರ್ಷದಲ್ಲಿ ಯೋಜನೆ ಅಡಿ 225.15 ಕೋಟಿ ಮಹಿಳಾ ಪ್ರಯಾಣಿಕರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಸಾಮಾನ್ಯ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಹೀಗೆ ಮಹಿಳಾ ಪ್ರಯಾಣಿಕರ ಉಚಿತ ಪ್ರಯಾಣದ ವೆಚ್ಚವನ್ನು ನಿಗಮಗಳಿಗೆ ರಾಜ್ಯ ಸರ್ಕಾರ ಭರಿಸುತ್ತಿದ್ದು, ಜೂನ್ 9ರವರೆಗೆ ಒಟ್ಟು 5481.40 ಕೋಟಿ ರು.ಗಳನ್ನು ನೀಡಲಾಗಿದೆ. ಆರಂಭದಲ್ಲಿ ಯೋಜನೆಗೆ ಸಾಕಷ್ಟು ವಿರೋಧ ವ್ಯಕ್ತವಾಯಿತಾದರೂ, ಆನಂತರ ಮಹಿಳಾ ಪ್ರಯಾಣಿಕರಿಂದ ಬಂದ ಪ್ರತಿಕ್ರಿಯೆಯಿಂದಾಗಿ ಯೋಜನೆ ಯಶಸ್ವಿಗೊಂಡಿದೆ.

ಶಿವಮೊಗ್ಗ: ಸೀಟ್‌ಗಾಗಿ ನಾರಿಯರ ಹೊಡೆದಾಟ, ಠಾಣೆಗೆ ಬಸ್‌ ಕೊಂಡೊಯ್ದ ನಿರ್ವಾಹಕ..!

ಯೋಜನೆ ಆರಂಭಕ್ಕೂ ಹಿಂದೆ ಕಡಿಮೆಯಿದ್ದ ಮಹಿಳಾ ಪ್ರಯಾಣಿಕರ ಸಂಖ್ಯೆ, ಯೋಜನೆ ನಂತರ ಪುರುಷ ಪ್ರಯಾಣಿಕರಿಗಿಂತ ಭಾರಿ ಪ್ರಮಾಣದಲ್ಲಿ ಹೆಚ್ಚುವಂತಾಗಿದೆ. ಶಕ್ತಿ ಆರಂಭದಿಂದ ಈವರೆಗೆ 390.58 ಕೋಟಿ ಒಟ್ಟು ಪ್ರಯಾಣಿಕರು ಸಂಚರಿಸಿದ್ದರೆ, ಅದರಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆಯೇ 225.15 ಕೋಟಿಯಾಗಿದೆ.

ಯೋಜನೆ ಆರಂಭವಾದ ತಿಂಗಳನ್ನು ಹೊರತುಪಡಿಸಿ ಆನಂತರದಿಂದ ಪ್ರತಿ ತಿಂಗಳು ಸರಾಸರಿ 18ರಿಂದ 19 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣ ಮಾಡಿದ್ದರು. ಅಲ್ಲದೆ, 2023-24ನೇ ಸಾಲಿನ 10 ತಿಂಗಳಲ್ಲಿ 181.69 ಕೋಟಿ ಮಹಿಳಾ ಪ್ರಯಾಣಿಕರು ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಿದ್ದು, ಅದಕ್ಕಾಗಿ ಸರ್ಕಾರ 4,341.13 ಕೋಟಿ ರು. ವ್ಯಯಿಸಿದೆ.

ಯಾವ ಕಾರಣಕ್ಕೂ ಯೋಜನೆ ನಿಲ್ಲಿಸಲ್ಲ

ಶಕ್ತಿ ಯೋಜನೆ ಯನ್ನು ವಿರೋಧ ಪಕ್ಷಗಳು ಆರಂಭ ದಲ್ಲಿ ಟೀಕಿಸಿದ್ದವು. ಆದರೆ, ಮಹಿಳೆ ಯರ ಸಬಲೀಕರಣಕ್ಕಾಗಿ ಜಾರಿಗೆ ತರಲಾದ ಯೋಜನೆಗೆ ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿ ಯಶಸ್ಸು ಕಂಡಿದೆ. ಶಕ್ತಿ ಯೋಜನೆಯನ್ನು ಚುನಾವಣೆಗಳನ್ನು ಗೆಲ್ಲಲು ಜಾರಿಗೆ ತಂದಿಲ್ಲ. ಬದಲಿಗೆ ಮಹಿಳೆಯರ ಅನುಕೂಲಕ್ಕಾಗಿ ಜಾರಿಗೆ ತರಲಾಗಿದೆ. ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. 

Latest Videos
Follow Us:
Download App:
  • android
  • ios