Asianet Suvarna News Asianet Suvarna News

ಕೊರೋನಾ ವೈರಸ್: ರಾಜ್ಯದಲ್ಲಿ ರೂಲ್ಸ್ ಚೇಂಜ್...!

ಕೊರೋನಾ ವೈರಸ್ ಗೈಡ್‌ಲೈನ್ಸ್‌ ನಿಯಮದಲ್ಲಿ ರಾಜ್ಯ ಸರ್ಕಾರ ಬದಲಿಸಿದೆ. ಈ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದಾರೆ.

Only Coronvirus patients  House Seal Down Says Minister R Ashok
Author
Bengaluru, First Published Aug 17, 2020, 4:02 PM IST

ಬೆಂಗಳೂರು, (ಆ.16): ಇನ್ಮುಂದೆ ಕೊರೋನಾ ಸೋಂಕಿನ ಪ್ರಕರಣ ಕಂಡುಬಂದಂತ ಮನೆಗಳನ್ನು ಅಷ್ಟೇ ಸೀಲ್ ಡೌನ್ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು (ಸೋಮವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಇದುವರೆಗೆ ಕೊರೋನಾ ಪ್ರಕರಣ ಪತ್ತೆಯಾದಂತ ಏರಿಯಾ, ರಸ್ತೆಯನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗುತ್ತಿತ್ತು. ಆದ್ರೆ, ಇನ್ಮುಂದೆ ಕೊರೋನಾ ಪ್ರಕರಣ ಪತ್ತೆಯಾದಂತ ಮನೆಯನ್ನಷ್ಟೇ ಸೀಲ್ ಡೌನ್ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಭಯಬೇಡ, ಕೊರೋನಾ ಗಾಳಿಯಲ್ಲಿ ಹರಡೋದು ಅಷ್ಟು ಸುಲಭವಲ್ಲ..!

ಈ ಹಿಂದೆ ಕೊರೋನಾ ಪ್ರಕರಣವಾದ ಮನೆಯಿಂದ ಸುತ್ತಮುತ್ತ 100 ಮೀಟರ್ ಪ್ರದೇಶವನ್ನು ಕಂಟೈನ್‌ಮೆಂಟ್ ಝೋನ್ ಎಂದು ಗುರುತಿಸಲಾಗಿತ್ತು. ಅಲ್ಲಿ ಫುಲ್ ಸೀಲ್ ಡೌನ್ ಮಾಡಲಾಗುತ್ತಿತ್ತು.

ಆದ್ರೆ, ಇದೀಗ ಸಚಿವ ಅಶೋಕ್ ಅವರು ಹೇಳಿದಂತೆ ಸೋಂಕು ಪತ್ತೆಯಾದ ಮನೆ ಮಾತ್ರ ಸೀಲ್ ಮಾಡಲಾಗುತ್ತದೆ. 

Follow Us:
Download App:
  • android
  • ios