20 ಜನರು ಸೇರುವಂತಿಲ್ಲ| ಹೊಸ ಮಾರ್ಗಸೂಚಿ ಪ್ರಕಟ| ಭಾನುವಾರ ಹೊಸ ಆದೇಶ ಹೊರಡಿಸಿದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್‌.ಮಂಜುನಾಥ್‌ ಪ್ರಸಾದ್| 

ಬೆಂಗಳೂರು(ಏ.26): ಕೋವಿಡ್‌ ನಿಯಂತ್ರಣ ಮಾರ್ಗಸೂಚಿ ಆದೇಶವನ್ನು ಕೊಂಚ ಪರಿಷ್ಕರಿಸಿರುವ ರಾಜ್ಯ ಸರ್ಕಾರ ಅಂತ್ಯಕ್ರಿಯೆಯಲ್ಲಿ ಗರಿಷ್ಠ 20 ಜನರ ಬದಲು ಕೇವಲ ಐದು ಜನರು ಮಾತ್ರ ಭಾಗವಹಿಸಬಹುದು ಎಂದು ತಿಳಿಸಿದೆ.

Add Asianetnews Kannada as a Preferred SourcegooglePreferred

ರಾಜ್ಯವನ್ನು ಭೀಕರವಾಗಿ ಕಾಡುತ್ತಿರುವ ಕೋವಿಡ್‌ ಎರಡನೇ ಅಲೆ ನಿಯಂತ್ರಣಕ್ಕೆ ಏ.21ರಿಂದ ನೈಟ್‌ ಕರ್ಫ್ಯೂ ಮತ್ತು ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 6ರವರೆಗೆ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿ ಆದೇಶ ಮಾಡಿತ್ತು.

ಕೊರೋನಾ ಇದೆಯಾ? ಇವರನ್ನು ಸಂಪರ್ಕಿಸಿ

ಈ ಆದೇಶದಲ್ಲಿ ಯಾವುದೇ ಮೃತ ವ್ಯಕ್ತಿಗಳ ಅಂತ್ಯಕ್ರಿಯೆಯಲ್ಲಿ ಗರಿಷ್ಠ 20 ಜನರು ಭಾಗವಹಿಸಲು ಅವಕಾಶ ನೀಡಲಾಗಿತ್ತು. ಈಗ ಅದನ್ನು ಮಾರ್ಪಡಿಸಿ ಕೇವಲ ಐದು ಜನರಿಗೆ ಮಿತಿಗೊಳಿಸಿ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ಎನ್‌.ಮಂಜುನಾಥ್‌ ಪ್ರಸಾದ್‌ ಭಾನುವಾರ ಆದೇಶ ಹೊರಡಿಸಿದ್ದಾರೆ.