Asianet Suvarna News Asianet Suvarna News

ಮೂರುಸ್ಥಾನ ಭರ್ತಿಗಷ್ಟೇ ಸಂಪುಟ ವಿಸ್ತರಣೆ ಸೀಮಿತ: ನಳಿನ್

ರಾಜ್ಯ ಸಚಿವ ಸಂಪುಟದ ವಿಸ್ತರಣೆ ಮತ್ತು ಸುಳ್ಯ ಶಾಸಕ ಎಸ್‌. ಅಂಗಾರರಿಗೆ ಸಚಿವ ಸ್ಥಾನ ನೀಡುವುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿರುವಂತದ್ದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.

only three post to be filled in cabinet expansion says state bjp president nalin kumar kateel
Author
Bangalore, First Published Aug 1, 2020, 10:14 AM IST

ಸುಳ್ಯ(ಆ.01): ರಾಜ್ಯ ಸಚಿವ ಸಂಪುಟದ ವಿಸ್ತರಣೆ ಮತ್ತು ಸುಳ್ಯ ಶಾಸಕ ಎಸ್‌. ಅಂಗಾರರಿಗೆ ಸಚಿವ ಸ್ಥಾನ ನೀಡುವುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿರುವಂತದ್ದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.

"

ಅವರು ಗ್ರಾಮ ವಿಕಾಸ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಸಹಕಾರ ಭಾರತಿ ದ.ಕ. ಮತ್ತು ಸುಳ್ಯ ಕೃಷಿ ಉತ್ಪನ್ನ ಮಾರುಕಟ್ಟೆಸಮಿತಿ ಇದರ ಆಶ್ರಯದಲ್ಲಿ ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ನಡೆಯುತ್ತಿರುವ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಶುಕ್ರವಾರ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಹಗ್ಗದಿಂದ ಎಳೆದು ತಂದು ಸೋಂಕಿತನ ಅಂತ್ಯಕ್ರಿಯೆ!

ಶಾಸಕ ಎಸ್‌. ಅಂಗಾರರಿಗೆ ಮಂತ್ರಿ ಸ್ಥಾನ ಸಿಗುವಂತೆ ನಮ್ಮ ಪ್ರಯತ್ನವಿರುತ್ತದೆ. ಈ ಬಾರಿ ಸಂಪುಟ ಪುನಾರಚನೆ ಆಗುವ ಸಾಧ್ಯತೆಯಿಲ್ಲ. ಮೂರು ಸ್ಥಾನಗಳನ್ನು ಭರ್ತಿ ಮಾಡಲಷ್ಟೆಸಂಪುಟ ವಿಸ್ತರಣೆ ಸೀಮಿತವಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿಗಳು ಬಿಜೆಪಿ ಹೈಕಮಾಂಡ್‌ ಜತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದರು.

ದೇಶದಲ್ಲಿ ಕರೋನಾ ಮಹಾಮಾರಿಯಿಂದ ಆರ್ಥಿಕ ಕುಸಿತವಾಗಿದೆ. ಜನ ಸಾಮಾನ್ಯರಿಗೆ ತೊಂದರೆ ಆಗಬಾರದು ಎನ್ನುವ ನಿಟ್ಟಿನಲ್ಲಿ ಪ್ರಧಾನಮಂತ್ರಿಗಳು ನೀಡಿದ 20 ಲಕ್ಷ ಕೋಟಿಗಳ ಅನುದಾನ ಮುಂದಿನ ದಿನಗಳಲ್ಲಿ ಭಾರತದ ಸ್ವಾಭಿಮಾನದ ಸಂಕೇತವಾಗಿ ಮತ್ತು ಯುವಜನತೆಯ ಉದ್ಯಮಶೀಲತೆಯ ಪ್ರೇರಣೆಗಾಗಿ ಆತ್ಮನಿರ್ಭರ ಭಾರತ ಎನ್ನುವ ಘೋಷಣೆ ಮಾಡಿದೆ. ಸ್ವದೇಶಿ ಚಿಂತನೆಯ ಆಧಾರದಲ್ಲಿ ಉದ್ದಿಮೆಗಳ ಮೂಲಕ ಸ್ವ ಉದ್ಯೋಗ ಸೃಷ್ಟಿಯ ಅಭಿನಂದನೀಯ ಕಾರ್ಯ ಶಿಬಿರದ ಮೂಲಕ ನಡೆಯುತ್ತಿದೆ ಎಂದರು.

Follow Us:
Download App:
  • android
  • ios