ಮೊದಲ ಸಹಕಾರಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾತೃ ಇನ್ನಿಲ್ಲ| 95000 ಕ್ಯಾನ್ಸರ್ ಕೇಸ್ ಪತ್ತೆ ಹಚ್ಚಿದ್ದ ‘ಪದ್ಮಶ್ರೀ’ ಪಾಟೀಲ್
ಹುಬ್ಬಳ್ಳಿ[ಫೆ.03]: ದೇಶದಲ್ಲೇ ಮೊದಲ ಸಹಕಾರಿ ಕ್ಯಾನ್ಸರ್ ಆಸ್ಪತ್ರೆ ಕಟ್ಟಿ, 95 ಸಾವಿರ ಕ್ಯಾನ್ಸರ್ ಪ್ರಕರಣಗಳನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ರೋಗಿಗಳ ಮುಖದಲ್ಲಿ ನಗು ಅರಳಿಸಿದ್ದ ಖ್ಯಾತ ವೈದ್ಯ ಪದ್ಮಶ್ರೀ ಡಾ.ಆರ್.ಬಿ.ಪಾಟೀಲ್(93) ಶನಿವಾರ ಮಧ್ಯಾಹ್ನ ನಿಧನರಾದರು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮೃತರಿಗೆ ಪತ್ನಿ ಯಮುನಕ್ಕ (85), ಪುತ್ರ ಡಾ.ಬಸವರಾಜ ಪಾಟೀಲ್, ಪುತ್ರಿಯರಾದ ಡಾ. ಸರೋಜಾ ಬೈರಿ, ಡಾ. ಶೈಲಾ ಮುದರಡ್ಡಿ ಇದ್ದಾರೆ. ಅಂತ್ಯಕ್ರಿಯೆ ಬಸವನ ಬಾಗೇವಾಡಿ ತಾಲೂಕಿನ ಕವಲಗಿ-ಅಂಗಡಿ ತೋಟದಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮೂಲತಃ ಬಸವನ ಬಾಗೇವಾಡಿಯವರಾದ ರೇವಣಸಿದ್ದಪ್ಪಗೌಡ ಪಾಟೀಲ್ ಮುಂಬೈ ಹಾಗೂ ಇಂಗ್ಲೆಂಡ್ಗಳಲ್ಲಿ ವೈದ್ಯಕೀಯ ಶಿಕ್ಷಣ ಪಡೆದ ಬಳಿಕ ಹುಬ್ಬಳ್ಳಿಯ ‘ಸಹಕಾರಿ ಆಸ್ಪತ್ರೆ’ಯಲ್ಲಿ ವೃತ್ತಿಜೀವನ ಆರಂಭಿಸಿದರು. 1977ರಲ್ಲಿ ಬಡರೋಗಿಗಳಿಗೆ ಅನುಕೂಲವಾಗಲೆಂದು ‘ಕರ್ನಾಟಕ ಕ್ಯಾನ್ಸರ್ ಥೆರಪಿ, ಸಂಶೋಧನಾ ಕೇಂದ್ರ’ (ಆಸ್ಪತ್ರೆ)ವನ್ನು ಮಿತ್ರರು, ದಾನಿಗಳ ನೆರವಿನಿಂದ ಆರಂಭಿಸಿದರು. ಜನಸಂಖ್ಯಾ ನಿಯಂತ್ರಣ ಆಂದೋಲನದಲ್ಲಿ ಭಾಗವಹಿಸಿ ಪುರುಷರು-ಸ್ತ್ರೀಯರು ಸೇರಿದಂತೆ ಒಟ್ಟು 5 ಸಾವಿರ ಮಂದಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿದ ಹಿರಿಮೆ ಇವರದು. ಡಾ.ಪಾಟೀಲ್ ಅನುಪಮ ಸೇವೆಗೆ ಕೇಂದ್ರ ಸರ್ಕಾರ 1996ರಲ್ಲಿ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 3, 2019, 10:26 AM IST