ಪಹಲ್ಗಾಮ್ ದಾಳಿ ಬಗ್ಗೆ ಕೇಂದ್ರದ ವಿರುದ್ಧ ಸುಳ್ಳು ಸುದ್ದಿ; ಕೋಲಾರದ ಮುನೀರ್ ಖಾನ್ ವಿರುದ್ಧ ಎಫ್ಐಆರ್

Synopsis
ಪಹಲ್ಗಾಮ್ ದಾಳಿಯನ್ನು ಕೇಂದ್ರ ಸರ್ಕಾರದ ಪೂರ್ವ ನಿಯೋಜಿತ ಕೃತ್ಯ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಕೋಲಾರದ ಯುವಕನ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಈತ ತನ್ನ ಯೂಟ್ಯೂಬ್ ಚಾನೆಲ್ನಲ್ಲಿ ಈ ಸುಳ್ಳು ಸುದ್ದಿ ಹಬ್ಬಿಸಿದ್ದ.
ಕೋಲಾರ (ಮೇ.8) 'ಪಹಲ್ಗಾಮ್ ದಾಳಿ ಕೇಂದ್ರ ಸರ್ಕಾರದ ಪೂರ್ವ ನಿಯೋಜಿತ' ಎಂಬ ಆಧಾರ ರಹಿತ ಸುಳ್ಳು ಸುದ್ದಿಯನ್ನು ತನ್ನ ಯೂಟ್ಯೂಬ್ ಚಾನೆಲ್ ಮೂಲಕ ಹಬ್ಬಿಸಿದ ಕೋಲಾರದ ಕುಂಬಾರಪೇಟೆ ನಿವಾಸಿ ಮುನೀರ್ ಖಾನ್ ಖುರೇಷಿ ಎಂಬ ವ್ಯಕ್ತಿಯ ವಿರುದ್ಧ ಗಲ್ಪೇಟೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ.
ಮುನೀರ್ ಖಾನ್, ಚಿಕನ್ ಅಂಗಡಿಯ ಮಾಲೀಕನಾಗಿದ್ದು, ತನ್ನ ಯೂಟ್ಯೂಬ್ ಚಾನೆಲ್ನಲ್ಲಿ ಅಪ್ಲೋಡ್ ಮಾಡಿದ ವಿಡಿಯೋದಲ್ಲಿ, ಪಹಲ್ಗಾಮ್ ದಾಳಿಯನ್ನು ಕೇಂದ್ರ ಸರ್ಕಾರದ 'ಪೂರ್ವ ಯೋಜಿತ ಕೃತ್ಯ' ಎಂದು ಬಿಂಬಿಸಿ, 'ಬಿಹಾರ ಚುನಾವಣೆಯಲ್ಲಿ ಹಿಂದೂಗಳ ಮತ ಗಳಿಸಲು ಈ ದಾಳಿ ನಡೆಸಲಾಗಿದೆ' ಎಂದು ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸಿದ್ದಾನೆ.
ಇದನ್ನೂ ಓದಿ: ಉಗ್ರ ಹಫೀಸ್ ಸಯೀದ್ ಮನೆ ಟಾರ್ಗೆಟ್; ಲಾಹೋರ್ ಮೇಲೆ ಭಾರತೀಯ ಸೇನೆ ಡ್ರೋನ್ ಅಟ್ಯಾಕ್!
ಈ ವಿಡಿಯೋ ಸಾರ್ವಜನಿಕರಲ್ಲಿ ಗೊಂದಲ, ಅಶಾಂತಿ ಹಾಗೂ ಕೋಮು ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದ್ದ ಕಾರಣ, ಪೊಲೀಸರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ. ಕೋಮು ಗಲಭೆ ತಡೆಗಟ್ಟಲು ಯೂಟ್ಯೂಬ್ನಿಂದ ಆ ವಿಡಿಯೋವನ್ನು ತೆಗೆದುಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಲ್ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವಿಚಾರಣೆಗೊಳಪಡಿಸಿದ್ದಾರೆ.