ಶಾಲೆಗಳಲ್ಲಿನ್ನು ಶಿಕ್ಷಕರ ಮೊಬೈಲ್‌ ಬಳಕೆ ನಿಷಿದ್ಧ| ‘ಪಕ್ಕೆಲುಬು’ ವಿಡಿಯೋ ವೈರಲ್‌ ಆದ ಹಿನ್ನೆಲೆ| ಮೊಬೈಲ್‌ ನಿಷೇಧಿಸಿ ಆದೇಶ: ಸಚಿವ ಸುರೇಶ್‌

ಉಡುಪಿ[ಜ.14]: ‘ಪಕ್ಕೆಲುಬು’ ಎಂದು ಉಚ್ಚರಿಸಲು ಬಾರದ ವಿದ್ಯಾರ್ಥಿಯೊಬ್ಬನನ್ನು ಶಿಕ್ಷಕಕನೊಬ್ಬ ಥಳಿಸಿದ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ರಾಜ್ಯಾದ್ಯಂತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕರು ಮೊಬೈಲ್‌ ಬಳಸುವುದನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯದ ಎಲ್ಲ ಜಿಲ್ಲೆಗಳ ಶಿಕ್ಷಣಾಧಿಕಾರಿಗಳಿಗೂ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪಕ್ಕೆಲುಬು’ ವಿಡಿಯೋ ಹರಿಬಿಟ್ಟ ಶಿಕ್ಷಕನ ವಿರುದ್ಧ ಕ್ರಮ

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ಕಾರ್ಯಕರ್ತರ ಸಂವಾದದಲ್ಲಿ ಅವರು ಈ ಮಾಹಿತಿ ನೀಡಿದರು. ಇತ್ತೀಚೆಗೆ ಶಾಲೆಯೊಂದರಲ್ಲಿ ಮಗುವೊಂದು ‘ಪಕ್ಕೆಲುಬು’ ಎಂದು ಉಚ್ಚರಿಸಲಾಗಿದೆ ಕಷ್ಟಪಡುತ್ತಿದ್ದ ಬಗ್ಗೆ ಶಿಕ್ಷಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಈ ಮೂಲಕ ಆ ಮಗುವಿಗೆ ಅವಮಾನ ಮಾಡಿದ್ದರು. ಆ ವಿಡಿಯೋದಲ್ಲಿ ಮಗುವಿನ ಮುಖದಲ್ಲಿದ್ದ ಆತಂಕ ಕಂಡಾಗ ನನಗೇ ಬಹಳ ಸಂಕಟವಾಯಿತು. ಇನ್ನು ಮಗುವಿನ ಹೆತ್ತವರಿಗೆ ಹೇಗಾಗಬೇಡ? ಈ ಸಂಬಂಧ ತಪ್ಪಿತಸ್ಥ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಆದರೆ ದುರಂತ ಎಂದರೆ ಆ ಜಿಲ್ಲೆಯಲ್ಲಿ ಶಿಕ್ಷಕನ ಅಮಾನತು ರದ್ದುಗೊಳಿಸಬೇಕು ಎಂದು ಪ್ರತಿಭಟನೆಗಳು ನಡೆಯುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

‘ಪಕ್ಕೆಲುಬು’ ಶಿಕ್ಷಕ ಕೊನೆಗೂ ಪತ್ತೆ; ಸೇವೆಯಿಂದ ಅಮಾನತು!

ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಮರುಕಳಿಸಬಾರದು. ಹಾಗಾಗಿ ಶಿಕ್ಷಕರು ಶಾಲೆಯಲ್ಲಿ ಮೊಬೈಲ್‌ಗಳನ್ನು ಕಡ್ಡಾಯವಾಗಿ ಬಳಸದಂತೆ ಆದೇಶಿಸಲಾಗಿದೆ. ಶಾಲೆಯ ಯಾವುದೇ ಮಗುವಿನ ನ್ಯೂನತೆಯನ್ನು ಈ ರೀತಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವುದು ಅಕ್ಷಮ್ಯ ಅಪರಾಧ. ಇಂಥದ್ದಕ್ಕೆಲ್ಲ ಯಾವುದೇ ಕಾರಣಕ್ಕೂ ನಾನು ಅವಕಾಶ ಕೊಡುವುದಿಲ್ಲ ಎಂದು ಸುರೇಶ್‌ ಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದರು.