ಸೇವಾ ನ್ಯೂನ್ಯತೆ ಎಸಗಿದ ಬಿಸ್ಲೇರಿ ಕಂಪನಿಗೆ ಧಾರವಾಡ ಜಿಲ್ಲಾ ಗ್ರಾಹಕ ಆಯೋಗ ವಿಚಾರಣೆ ನಡೆಸಿ ದಂಡ ಮತ್ತು ಪರಿಹಾರ ನೀಡುವಂತೆ ಸೂಚಿಸಿದೆ.

ವರದಿ : ಪರಮೇಶ್ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್ ಧಾರವಾಡ 

Add Asianetnews Kannada as a Preferred SourcegooglePreferred

ಧಾರವಾಡ (ಸೆ.5) : ಹುಬ್ಬಳ್ಳಿಯ ಲಿಂಗರಾಜ ನಗರದ ಹೂಗಾರ ಲೇಔಟನ ದೇವೆಂದ್ರಪ್ಪ ಹೂಗಾರ ಅನ್ನುವವರು ಹುಬ್ಬಳ್ಳಿಯ ಕ್ಲಬ್‍ ರಸ್ತೆಯಲ್ಲಿ ಶ್ರೀ ರಾಘವೇಂದ್ರ ಜ್ಯೂಸ್ ಹಾಗೂ ಐಸ್‍ಕ್ರೀಮ್ ಅಂಗಡಿಯನ್ನು ಸ್ವಯಂ ಉದ್ಯೋಗದ ಅಡಿ ನಡೆಸುತ್ತಿದ್ದರು ಅವರು ತಮ್ಮ ಅಂಗಡಿಯಲ್ಲಿ ಬಿಸ್ಲೇರಿ ನೀರು ಜ್ಯೂಸ್ ಮತ್ತು ಐಸ ಕ್ರೀಮಗಳನ್ನು ಮಾರಾಟ ಮಾಡುತ್ತಿದ್ದರು ಜನವರಿ 01, 2023 ರಂದು ದೂರುದಾರ ಹಳೆ ಹುಬ್ಬಳ್ಳಿಯ ಆನಂದ ನಗರದ ಸಾಯಿ ಎಂಟರ ಪ್ರೈಸಸ್‍ರವರಿಂದ ರೂ.495 ಕೊಟ್ಟು ವಿವಿಧ ಬಗೆಯ ಬಿಸ್ಲೇರಿ ಬಾಟಲಿಗಳನ್ನು ಖರೀದಿಸಿದ್ದರು

ಆ ಬಾಕ್ಸನ್ನ ತೆಗೆದು ನೋಡಿದಾಗ 1 ಲೀಟರಿನ ಬಿಸ್ಲೇರಿ ಬಾಟಲಿಯಲ್ಲಿ ಸತ್ತ ಮತ್ತು ಕೊಳೆತ ಜೇಡರ ಹುಳು ಇತ್ತು ಆ ಬಾಟಲಿಯ ನೀರು ಸಹ ಪರಿಶುದ್ಧವಾಗಿಲ್ಲ ಕಾರಣ ಬಿಸ್ಲೇರಿ ನೀರಿನ ಬಾಟಲಿಯ ಉತ್ಪಾದಕರಾದ ಮಸ್ಕಿಯ ಸಪ್ತಗಿರಿ ಇಂಡಸ್ಟ್ರೀಸ್, ಮುಂಬೈ ಬಿಸ್ಲೇರಿ ಕಂಪನಿ ಹಾಗೂ ಹುಬ್ಬಳ್ಳಿಯ ಸಾಯಿ ಎಂಟರ ಪ್ರೈಸಸ್‍ರವರು ತನಗೆ ಸೇವಾ ನ್ಯೂನ್ಯತೆ ಎಸಗಿದ್ದಾರೆ ಅಂತಾ ಹೇಳಿ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ದೂರುದಾರರು ಗ್ರಾಹಕ ರಕ್ಷಣಾ ಕಾಯ್ದೆ ಅಡಿ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ 20.02.2023 ರಂದು ದೂರು ಸಲ್ಲಿಸಿದ್ದರು. 

ಠೇವಣಿ ಹಣ ಹಿಂದಿರುಗಿಸದ ಸರಸ್ವತಿ ಕೋ ಆಪ್‍ರೇಟಿವ್ ಸೊಸೈಟಿಗೆ ₹11 ಲಕ್ಷ 76 ಸಾವಿರ ದಂಡ ಮತ್ತು ಪರಿಹಾರ

ದೂರಿನ ಜೊತೆ ಆ ಬಿಸ್ಲೇರಿ ಬಾಟಲಿಯನ್ನು ಆಯೋಗ ಮುಂದೆ ಹಾಜರುಪಡಿಸಿದ್ದರು ದೂರುದಾರ ವ್ಯಾಪಾರಸ್ಥನಿದ್ದು ಅವನು ತನ್ನ ವ್ಯವಹಾರಕ್ಕಾಗಿ ಆ ಬಿಸ್ಲೇರಿ ಬಾಟಲಿಗಳನ್ನು ಖರೀದಿಸಿರುವುದರಿಂದ ಅವನು ಗ್ರಾಹಕನಾಗುವುದಿಲ್ಲ ಅಂತಾ 2 ಮತ್ತು 3ನೇ ಎದುರುದಾರರು ಆಕ್ಷೇಪಣೆ ಎತ್ತಿದ್ದರು ಅಲ್ಲದೇ ತಾವು ಅಂತರಾಷ್ಟ್ರೀಯ ಖ್ಯಾತಿಯ ನೀರು ಬಾಟಲಿ ಉತ್ಪಾದಕರಿದು ತಾವು ಪ್ರತಿ ಬಾಟಲಿ ನೀರನ್ನು ತಯಾರಿಸುವಾಗ ಆ ನೀರುಗಳ ಗುಣಮಟ್ಟ ಮತ್ತು ಪರಿಶುದ್ಧತೆಯ ಬಗ್ಗೆ ಪರಿಶೀಲಿಸಿ ಕಾಳಜಿ ವಹಿಸಿ ತಯಾರಿಸುವುದಾಗಿ ಮತ್ತು ತಮ್ಮಿಂದ ಯಾವುದೆ ಸೇವಾ ನ್ಯೂನ್ಯತೆ ಆಗಿಲ್ಲ ಅಂತಾ 2 ಮತ್ತು 3ನೇ ಎದುರುದಾರರು ಆಕ್ಷೇಪಿಸಿದ್ದರು.

ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗ ಅಧ್ಯಕ್ಷ ಈಶಪ್ಪ ಭೂತೆ ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು. ಸಿ. ಹಿರೇಮಠ ಅವರು ದೂರುದಾರ ಕಿರುಕುಳ ವ್ಯಾಪಾರಿ ಆಗಿದ್ದರೂ ಸಹ ಅವನು ತನ್ನ ಕುಟುಂಬ ನಿರ್ವಹಣೆಗಾಗಿ ಸ್ವಯಂ ಉದ್ಯೋಗ ನಡೆಸುತ್ತಿರುವುದರಿಂದ ಅವನು ಗ್ರಾಹಕನಾಗುತ್ತಾನೆ ಮತ್ತು ಬಿಸ್ಲೇರಿ ಕಂಪನಿಯವರು ಸೇವೆ ಒದಗಿಸುವವರಾಗುತ್ತಾರೆ ಅಂತಾ ಆಯೊಗ ಅಭಿಪ್ರಾಯ ಪಟ್ಟು ತೀರ್ಪು ನೀಡಿದೆ. ಆಯೋಗದ ಮುಂದೆ ಹಾಜರು ಮಾಡಿದ ಶೀಲು ಹೊಂದಿರುವ ಬಿಸ್ಲೇರಿ ನೀರಿನ ಬಾಟಲಿಯಲ್ಲಿ ಸತ್ತ ಮತ್ತು ಕೊಳೆತ ಜೇಡರ ಹುಳು ಇದೆ ಅದರಲ್ಲಿರುವ ನೀರು ಕಲುಶಿತವಾಗಿರುತ್ತವೆ. ಕಾರಣ ಎದುರುದಾರರ ಆಕ್ಷೇಪಣೆಗಳನ್ನು ತಳ್ಳಿಹಾಕಿ ಅವರು ಕಳಪೆ ಗುಣಮಟ್ಟದ ನೀರು ಉತ್ಪಾದಿಸಿ ಸರಬರಾಜು ಮಾಡಿರುವುದರಿಂದ ಬಿಸ್ಲೇರಿ ಕಂಪನಿಯವರು ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಆಯೋಗ ತನ್ನ ತೀರ್ಪಿನಲ್ಲಿ ಹೇಳಿದೆ.

ಸೇವಾ ನ್ಯೂನತೆ: ಜಿಯೋ ಕಂಪನಿಗೆ ಸಿಮ್ ಸಕ್ರಿಯಗೊಳಿಸಲು ಗ್ರಾಹಕ ಆಯೋಗ ನಿರ್ದೇಶನ

ಬಿಸ್ಲೇರಿ ಬಾಟಲಿಗಳನ್ನು ಖರೀದಿಸಲು ದೂರುದಾರ ಕೊಟ್ಟ ರೂ.495 ಹಣವನ್ನು ಅವನಿಗೆ ಹಿಂತಿರುಗಿಸಬೇಕು ಮತ್ತು ಸೇವಾ ನ್ಯೂನ್ಯತೆಯಿಂದ ದೂರುದಾರನಿಗೆ ಆಗಿರುವ ಅನಾನುಕೂಲ ಮತ್ತು ಮಾನಸಿಕ ಹಿಂಸೆಗಾಗಿ ರೂ.50,000 ಪರಿಹಾರ ಮತ್ತು ರೂ.10,000 ಪ್ರಕರಣದ ಖರ್ಚು ವೆಚ್ಚ ದೂರುದಾರನಿಗೆ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಸಂದಾಯ ಮಾಡುವಂತೆ ಬಿಸ್ಲೇರಿ ಕಂಪನಿ ಮತ್ತು ಮಸ್ಕಿಯ ಸಪ್ತಗಿರಿ ಇಂಡಸ್ಟ್ರೀಸ್ ರವರಿಗೆ ಆಯೋಗ ಆದೇಶಿಸಿದೆ.