ಫೋನ್ ಕದ್ದಾಲಿಕೆ ಸಂಬಂಧ 54 ಜನ ಪೊಲೀಸ್ ಇನ್ಸ್‌ಪೆಕ್ಟರ್‌ಗಳಿಗೆ ಸಿಬಿಐ ನೋಟಿಸ್ ಜಾರಿಗೊಳಿಸಿದೆ. ನ.4 ಮತ್ತು 5ರಂದು ವಿಚಾರಣೆಗೆ ಹಾಜರಾಗುವಂತೆ ಇನ್ಸ್‌ಪೆಕ್ಟರ್‌ಗಳಿಗೆ ಸೂಚಿಸಿದೆ ಎಂದು ತಿಳಿದು ಬಂದಿದೆ.

ಬೆಂಗಳೂರು(ನ.03): ಫೋನ್‌ ಕದ್ದಾಲಿಕೆ ಪ್ರಕರಣ ಸಂಬಂಧ ಬೆಂಗಳೂರು ನಗರ ಸೇರಿದಂತೆ ರಾಜ್ಯದ 54 ಇನ್ಸ್‌ಪೆಕ್ಟರ್‌ಗಳಿಗೆ ವಿಚಾರಣೆ ಹಾಜರಾಗುವಂತೆ ಸಿಬಿಐ ನೋಟಿಸ್‌ ಜಾರಿಗೊಳಿಸಿದೆ. ವಿವಿಧ ಅಪರಾಧ ಪ್ರಕರಣಗಳ ತನಿಖಾಧಿಕಾರಿಗಳಾಗಿದ್ದ ಇನ್ಸ್‌ಪೆಕ್ಟರ್‌ಗಳು, ತನಿಖೆ ಸಂದರ್ಭದಲ್ಲಿ ಕೆಲವರ ಫೋನ್‌ ಕದ್ದಾಲಿಕೆ ನಡೆಸುತ್ತಿದ್ದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಹಿನ್ನೆಲೆಯಲ್ಲಿ ಸಿಬಿಐ, ಇನ್ಸ್‌ಪೆಕ್ಟರ್‌ಗಳಿಂದ ವಿವರಣೆ ಪಡೆಯಲು ಮುಂದಾಗಿದೆ. ಅದರಂತೆ ನ.4 ಮತ್ತು 5ರಂದು ವಿಚಾರಣೆಗೆ ಹಾಜರಾಗುವಂತೆ ಇನ್ಸ್‌ಪೆಕ್ಟರ್‌ಗಳಿಗೆ ಸೂಚಿಸಿದೆ ಎಂದು ತಿಳಿದು ಬಂದಿದೆ.

ಫೋನ್‌ ಕದ್ದಾಲಿಕೆ : ಮತ್ತಷ್ಟು ಅಧಿಕಾರಿಗಳಿಗೆ ಎದುರಾಗಿದೆ ಸಂಕಷ್ಟ

ತಾವು ತನಿಖೆ ನಡೆಸಿದ ಪ್ರಕರಣಗಳಲ್ಲಿ ಯಾವ ಕಾರಣಕ್ಕೆ ಕದ್ದಾಲಿಕೆ ನಡೆಸಲಾಯಿತು? ಆ ಪ್ರಕರಣದಲ್ಲಿ ಕದ್ದಾಲಿಕೆಗೆ ಒಳಗಾದ ವ್ಯಕ್ತಿಯ ಪಾತ್ರವೇನು? ಕದ್ದಾಲಿಕೆ ಬಳಿಕ ಆ ವ್ಯಕ್ತಿ ಮೇಲೆ ಕೈಗೊಂಡ ಕ್ರಮವೇನು ಎಂಬುದು ಸೇರಿದಂತೆ ಹಲವು ಪ್ರಶ್ನೆಗಳನ್ನು ಸಿಬಿಐ ಕೇಳಿ ಸ್ಪಷ್ಟೀಕರಣ ಪಡೆಯಲು ಸಿದ್ಧವಾಗಿದೆ ಎಂದು ಮೂಲಗಳು ಹೇಳಿವೆ.

ಯಾರೇ ಫೋನ್‌ ಟ್ಯಾಪ್‌ ಮಾಡಿದ್ದರೂ ಸುಮ್ಮನಿರಲ್ಲ!