Asianet Suvarna News Asianet Suvarna News

ಬಿಯಾಂಡ್ ಬೆಂಗಳೂರು ಅಭಿವೃದ್ಧಿಗೆ ಸರ್ಕಾರದ ಯೋಜನೆ: ಸಿಎಂ ಬೊಮ್ಮಾಯಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳವಣಿಗೆ ಆಗುತ್ತಿರುವ ರಾಜ್ಯ ರಾಜಧಾನಿ ಬೆಂಗಳೂರನ್ನು ಉತ್ತಮ ಬೆಂಗಳೂರು, ನೂತನ ಉಪನಗರ, ಬಿಯಾಂಡ್ ಬೆಂಗಳೂರು ಅಭಿವೃದ್ಧಿ ಮಾಡುವುದೇ ನಮ್ಮ ಸರ್ಕಾರದ ಯೋಜನೆಯಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

Plan for Brand and Beyond Bangalore Development CM Bommai sat
Author
First Published Jan 7, 2023, 4:09 PM IST

ಬೆಂಗಳೂರು (ಜ.07): ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳವಣಿಗೆ ಆಗುತ್ತಿರುವ ರಾಜ್ಯ ರಾಜಧಾನಿ ಬೆಂಗಳೂರನ್ನು ಉತ್ತಮ ಬೆಂಗಳೂರು, ನೂತನ ಉಪನಗರ, ಬಿಯಾಂಡ್ ಬೆಂಗಳೂರು ಅಭಿವೃದ್ಧಿ ಮಾಡುವುದೇ ನಮ್ಮ ಸರ್ಕಾರದ ಯೋಜನೆಯಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಜೆಡಬ್ಲ್ಯೂ ಮ್ಯಾರಿಯಟ್ ಹೊಟೇಲ್ ನಲ್ಲಿ ಇಂದು ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿ ಅವರು ಭವಿಷ್ಯದ ಬೆಂಗಳೂರು ನಿರ್ಮಿಸಲು ಹಾಗೂ ಹಳೆಯದನ್ನು ಸರಿಪಡಿಸಲು ಎರಡು ಯೋಜನೆಗಳು ಅಗತ್ಯವಿದೆ. ಇದಕ್ಕಾಗಿ ಅಗಾಧ ಹೂಡಿಕೆಯ ಅಗತ್ಯವಿದೆ. ತ್ಯಾಜ್ಯ ನಿರ್ವಹಣೆ, ಒಳಚರಂಡಿ, ರಾಜಕಾಲುವೆ, ರಸ್ತೆ ನಿರ್ವಹಣೆಯ ಸುಧಾರಣೆಯೂ ಆಗಬೇಕು. ಸಂಚಾರ ನಿರ್ವಹಣೆ ಸೇರಿದಂತೆ ಸಾರಿಗೆ, ಉಪನಗರ ರೈಲು, ರಸ್ತೆ, ಸಿಗ್ನಲ್ ಮುಂತಾದವನ್ನು ಇದು ಒಳಗೊಂಡಿದೆ ಎಂದರು.

ಸಂಚಾರ ವ್ಯವಸ್ಥೆ ನಿರ್ವಹಣೆ: ಸಂಚಾರ ವ್ಯವಸ್ಥೆ ನಿರ್ವಹಣೆಗೆ  ಪ್ರತ್ಯೇಕ ಆಯುಕ್ತಾಲಯವನ್ನು ರಚಿಸಲಾಯಿತು. ಇದರಿಂದಾಗಿ ಸಾಕಷ್ಟು ಬದಲಾವಣೆ ತರಲು ಸಾಧ್ಯವಾಗಿದೆ. ಸಿಗ್ನಲ್ ವ್ಯವಸ್ಥೆ ಸುಧಾರಣೆ, ಹೆಚ್ಚುವರಿ ರಸ್ತೆಗಳು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ದಟ್ಟಣೆಯನ್ನು ತಪ್ಪಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.ಇಂಧನ ವಲಯದಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ. ಬೆಳಗಾವಿ, ಕಲಬುರಗಿ, ಬಳ್ಳಾರಿ, ದಾವಣಗೆರೆ ನಗರಗಳು ಅತ್ಯುತ್ತಮ ರಸ್ತೆ ಹಾಗೂ ಸೌಲಭ್ಯಗಳನ್ನು ಹೊಂದಿವೆ. ಬಿಜಾಪುರ, ರಾಯಚೂರು, ಶಿವಮೊಗ್ಗ, ಹಾಸನ, ಧಾರವಾಡ ಗಳಲ್ಲಿ ವಿಮಾನ ನಿಲ್ದಾಣ ಗಳು ಶೀಘ್ರವಾಗಿ ಬರಲಿದೆ. ಈ ನಗರಗಳು ಇದನ್ನು ಸಾಧಿಸಲು ಸಾಧ್ಯವಾಗಿದ್ದರೆ, ಬೆಂಗಳೂರಿನಲ್ಲಿಯೂ ಸಹ ಸಾಧ್ಯವಾಗಿಸಬಹುದು ಎಂದರು.

 

ಬಿಯಾಂಡ್ ಬೆಂಗಳೂರು ಸಮಾವೇಶ, ಸಹಭಾಗಿತ್ವದಲ್ಲಿ ಅಮೆರಿಕವನ್ನು ನೋಡಿ ಕಲಿಯಬೇಕಿದೆ: ಅಶ್ವತ್ಥನಾರಾಯಣ

ಟೆಕ್‌ ಸಮ್ಮಿಟ್‌ನಲ್ಲಿ 8 ಲಕ್ಷ ಕೋಟಿ ಹೂಡಿಕೆ: ಬೆಂಗಳೂರಿನಲ್ಲಿ ಅತ್ಯುತ್ತಮ ಅಂತರರಾಷ್ಟ್ರೀಯ ನಗರವಾಗಿ ಬೆಳೆಯುವ ಎಲ್ಲಾ ಲಕ್ಷಣಗಳಿವೆ. ವಿಶ್ವದಲ್ಲಿಯೇ ಅತಿ ಹೆಚ್ಚು ಅಂದರೆ 400 ಆರ್ ಅಂಡ್ ಡಿ ಕೇಂದ್ರಗಳು ಇಲ್ಲಿವೆ. ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 8 ಲಕ್ಷ ಕೋಟಿ ಹೂಡಿಕೆಯಾಗುತ್ತಿದೆ. 3.5 ಲಕ್ಷ ಕೋಟಿ ರೂ. ಗಳ ಯೋಜನೆಗಳಿಗೆ ಉನ್ನತ ಮಟ್ಟದ ಸಮಿತಿಯಲ್ಲಿ ಮಂಜೂರಾತಿ ನೀಡಲಾಗಿದೆ. ಬೆಂಗಳೂರು ಟೆಕ್ ಸಮ್ಮಿಟ್ ಅತ್ಯಂತ ಯಶಸ್ವಿಯಾಗಿ ನೆರವೇರಿದೆ. ಇವಿ ಆರ್.ಅಂಡ್ ಡಿ ಕರ್ನಾಟಕದಲ್ಲಿವೆ ಆದರೆ ಉತ್ಪಾದನೆ ಇತರ ರಾಜ್ಯಗಳಲ್ಲಿವೆ. ನಮ್ಮ ಶಕ್ತಗಳನ್ನು ನಾವು ಬಳಸಿಕೊಳ್ಳಬೇಕು. ಮುಂದಿನ ತಿಂಗಳು ಏರೋ ಶೋ ನಡೆಯಲಿದೆ. ಬೆಂಗಳೂರು ಐ.ಟಿ ಬಿಟಿ ಸ್ಟಾರ್ಟ್ ಅಪ್ ಹಾಗೂ ಏರೋಸ್ಪೇಸ್ ನಗರ. ಏರೋಸ್ಪೇಸ್ ಬಿಡಿ ಭಾಗಗಳನ್ನು ಇಲ್ಲಿ ತಯಾರಿಸಲಾಗುತ್ತಿದೆ. ವಿಮಾನಗಳನ್ನು ಉತ್ಪಾದನೆ ಮಾಡುವ ಮಟ್ಟಕ್ಕೆ ಬೆಂಗಳೂರು ಬೆಳೆಯಬೇಕಿದೆ ಎಂದರು. 

 

ಸೋನಿಯಾ ಮನೆ ಬಳಿ ಕಾದು ನಿಲ್ಲುತ್ತಿದ್ದ ಸಿದ್ದರಾಮಯ್ಯ: ಸಿಎಂ ಬೊಮ್ಮಾಯಿ

ವಾರ್ಷಿಕ 2 ಲಕ್ಷ ಉದ್ಯೋಗ ಸೃಷ್ಟಿ: ಬೆಂಗಳೂರು ಅವಕಾಶಗಳ ನಗರಿಯಾಗಿದೆ. ಬೆಂಗಳೂರು 2 ಲಕ್ಷ ಉದ್ಯೋಗಗಳನ್ನು ಪ್ರತಿ ವರ್ಷ ಸೃಜಿಸುತ್ತಿದೆ. ಮೂಲ ಸಮಸ್ಯೆಗಳನ್ನು ಸರಿಪಡಿಸುತ್ತಲೇ, ಸಕಾರಾತ್ಮಕ ಅಂಶಗಳನ್ನು ಬಳಸಿಕೊಂಡು ಬ್ರಾಂಡ್ ಬೆಂಗಳೂರು ಅಭಿವೃದ್ಧಿ ಪಡಿಸಬೇಕು. ಫಾಸ್ಟ್ ಫಾರ್ವರ್ಡ್ ಆಗಿ ಕೆಲಸ ಮಾಡಬೇಕು. ಈ ಕಾರ್ಯದಲ್ಲಿ ಸರ್ಕಾರ, ಖಾಸಗಿ ವಲಯ, ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಒಟ್ಟಾಗಿ ಕೆಲಸ ಮಾಡಬೇಕು. ಪ್ರತಿ ನಗರದಲ್ಲಿ ನಾಗರಿಕ ಸಂಸ್ಥೆಗಳಿವೆ. ಲಭ್ಯವಿರುವ ಅಗಾಧ ಪ್ರತಿಭೆಯನ್ನು ಬಳಸಿಕೊಂಡು ಹೊಂದಿರುವ ಬೆಂಗಳೂರನ್ನು ಉತ್ತಮಗೊಳಿಸುವ ಪ್ರಯತ್ನಗಳಾಗಬೇಕು.  ಕಠಿಣ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲು ನಿರಂತರವಾಗಿ ಪ್ರಯತ್ನ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಆಡಳಿತ ಮತ್ತು ಸಾರ್ವಜನಿಕರ ಮನೋಭಾವ ಬದಲಾಗಬೇಕು. ಸಾವಾಲುಗಳನ್ನು ಯಶಸ್ಸಿನ ಮೆಟ್ಟಿಲಾಗಿಸಿಕೊಳ್ಳಬೇಕು ಎಂದರು.

Follow Us:
Download App:
  • android
  • ios