ಮೋದಿ ಅವರು ಎಚ್‌ಎಎಲ್‌ಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಮೋದಿ, ಲಘು ಯುದ್ಧ ವಿಮಾನ ತೇಜಸ್‌ ಉತ್ಪಾದನೆ ಸೇರಿದಂತೆ ಎಚ್‌ಎಎಲ್‌ನ ಉತ್ಪಾದನಾ ಘಟಕದ ಸೌಲಭ್ಯ ಹಾಗೂ ಇತರ ಕೆಲಸಗಳನ್ನು ಪರಿಶೀಲನೆ ನಡೆಸಲಿದ್ದಾರೆ. 

ಬೆಂಗಳೂರು(ನ.25):  ಪ್ರಧಾನಿ ನರೇಂದ್ರ ಮೋದಿ ಇಂದು(ಶನಿವಾರ) ಬೆಂಗಳೂರಿಗೆ ಬಂದಿಳಿದಿದ್ದಾರೆ. ಬೆಳಗ್ಗೆ 9:15ಕ್ಕೆ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದಾರೆ. ಮೋದಿ ಅವರು ಎಚ್‌ಎಎಲ್‌ (ಹಿಂದುಸ್ತಾನ್‌ ಏರೋನಾಟಿಕಕ್ಸ್‌ ಲಿಮಿಟೆಡ್‌ )ಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಮೋದಿ, ಲಘು ಯುದ್ಧ ವಿಮಾನ ತೇಜಸ್‌ ಉತ್ಪಾದನೆ ಸೇರಿದಂತೆ ಎಚ್‌ಎಎಲ್‌ನ ಉತ್ಪಾದನಾ ಘಟಕದ ಸೌಲಭ್ಯ ಹಾಗೂ ಇತರ ಕೆಲಸಗಳನ್ನು ಪರಿಶೀಲನೆ ನಡೆಸಲಿದ್ದಾರೆ. 

Add Asianetnews Kannada as a Preferred SourcegooglePreferred

ರಕ್ಷಣಾ ವಸ್ತುಗಳನ್ನು ಸ್ವದೇಶದಲ್ಲೇ ಉತ್ಪಾದಿಸುವ ಗುರಿಯೊಂದಿಗೆ ತೇಜಸ್ ಉತ್ಪಾದನೆಗೆ ನಾಂದಿ ಹಾಡಲಾಗಿತ್ತು. ಈಗಾಗಲೇ ತೇಜಸ್ ಅನ್ನು ಖರೀದಿಸಲು ಹಲವಾರು ದೇಶಗಳು ಆಸಕ್ತಿ ತೋರಿಸಿದ್ದು, ಅಮೆರಿಕದ ರಕ್ಷಣಾ ದೈತ್ಯ ಜಿಇ ಏರೋಸ್ಪೇಸ್ ಎಂಕೆ-11- ತೇಜಸ್‌ಗೆ ಜಂಟಿಯಾಗಿ ಎಂಜಿನ್‌ಗಳನ್ನು ಉತ್ಪಾದಿಸಲು ಎಚ್‌ಎಎಲ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. 2022-2023ರ ಆರ್ಥಿಕ ವರ್ಷದಲ್ಲಿ ಭಾರತದ ರಕ್ಷಣಾ ರಫ್ತು ಸಾರ್ವಕಾಲಿಕ ಗರಿಷ್ಠ 15,920 ಕೋಟಿ ರು. ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಮುಟ್ಟಿದ್ದೆಲ್ಲವೂ ಚಿನ್ನ, ಅವರು ಸೋಲಿಲ್ಲದ ಸರದಾರ: 'ಅಪಶಕುನ' ಎಂದವರಿಗೆ ಕಂಗನಾ ತಿರುಗೇಟು

ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಿದ ಹಿನ್ನಲೆಯಲ್ಲಿ ಎಚ್ಎಎಲ್ ಸುತ್ತಮುತ್ತ ಭಾರೀ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಲಿಸಲಾಗಿದೆ. ಭದ್ರತೆಗೆ ಸುಮಾರು 500ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ವೈಟ್ ಫೀಲ್ಡ್ ಡಿಸಿಪಿ ನೇತೃತ್ವದಲ್ಲಿ ಪೊಲೀಸರ ಬಂದೋಬಸ್ತ್ ಕಲ್ಪಿಸಲಾಗಿದೆ. 4 ಎಸಿಪಿ, 8 ಇನ್ಸ್ಪೆಕ್ಟರ್ ಸೇರಿ 500 ಪೊಲೀಸರು ಭದ್ರತೆಗೆ ನಿಯೋಜಿಸಲಾಗಿದೆ.