ಸಂತೋಷ್ ಆತ್ಮಹತ್ಯೆ ಕೇಸ್: ವಿವರಣೆ ಪಡೆದ ಪ್ರಧಾನಿ ಮೋದಿ
* ಬಿ.ಎಲ್.ಸಂತೋಷ್ರನ್ನು ಕರೆಸಿ ವಿವರ ಪಡೆದ ಮೋದಿ
* ಬಿಜೆಪಿ ಪಾಲಿಗೆ ಮುಜುಗರ ತಂದಿಟ್ಟ ಸಂತೋಷ್ ಆತ್ಮಹತ್ಯೆ ಕೇಸ್
* ಸಂತೋಷ್ ಆತ್ಮಹತ್ಯೆ ಹಿಂದೆ ದೊಡ್ಡ ಕೈವಾಡ
ನವದೆಹಲಿ(ಏ.14): ಬಿಜೆಪಿ ಪಾಲಿಗೆ ತೀವ್ರ ಮುಜುಗರ ಸೃಷ್ಟಿಸಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ(Santosh Patiil Suicide) ಪ್ರಕರಣಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಬುಧವಾರ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ರನ್ನು(BL Santosh) ಕರೆಸಿ ವಿವರ ಪಡೆದಿದ್ದಾರೆ.
ಪೂರ್ವನಿರ್ಧರಿತ ಕಾರ್ಯಕ್ರಮದಂತೆ ಸಂತೋಷ್ ಜೀ ಅವರು ಪ್ರಧಾನಿ ಅವರನ್ನು ಭೇಟಿಯಾದ ವೇಳೆ ರಾಜ್ಯದ(Karnataka) ಬೆಳವಣಿಗೆಗಳು ಚರ್ಚೆಗೆ ಬಂತು. ಈ ವೇಳೆ ಸಂತೋಷ್ ಪಾಟೀಲ ಅವರ ಆತ್ಮಹತ್ಯೆ ಹಾಗೂ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ(KS Eshwarappa) ಅವರ ಪಾತ್ರದ ಕುರಿತು ಪ್ರಧಾನಿ ಅವರು ಮಾಹಿತಿ ಪಡೆದುಕೊಂಡರು ಎನ್ನಲಾಗಿದೆ. ಈ ಮಧ್ಯೆ, ಘಟನೆಗೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಜೆ.ಪಿ.ನಡ್ಡಾ(JP Nadda) ಅವರು ರಾಜ್ಯ ಬಿಜೆಪಿ ಘಟಕದಿಂದ ವರದಿ ಕೇಳಿದ್ದಾರೆ ಎನ್ನಲಾಗಿದೆ.
ಸಂತೋಷ್ ಸೂಸೈಡ್ ಕೇಸ್: ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಸಿಎಂ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಯತ್ನ
ಸಂತೋಷ್ ಆತ್ಮಹತ್ಯೆ ಹಿಂದೆ ದೊಡ್ಡ ಕೈವಾಡ-ಅರುಣ್ ಸಿಂಗ್
ಬೆಳಗಾವಿ: ಬೆಳಗಾವಿ(Belagavi) ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಹಿಂದೆ ದೊಡ್ಡ ಕೈವಾಡ ಇದ್ದು ಸಚಿವ ಈಶ್ವರಪ್ಪ ರಾಜೀನಾಮೆಗೆ ಸಂಬಂಧಿಸಿದಂತೆ ನಡೆದಿರುವ ಎಲ್ಲ ಬೆಳವಣಿಗೆಗಳ ಸಂಪೂರ್ಣ ಮಾಹಿತಿ ಪಡೆದುಕೊಂಡು ಹೈಕಮಾಂಡ್ಗೆ ವರದಿ ನೀಡಲಾಗುವುದು. ಜೊತೆಗೆ ಅವರ ವಿರುದ್ಧ ಕೇಳಿ ಬರುತ್ತಿರುವ ಆರೋಪಗಳ ಸಂಬಂಧ ಶೀಘ್ರವೇ ಕ್ರಮ ವಹಿಸಲಾಗುವುದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್(Arun Singh) ತಿಳಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ತನಿಖೆ ನಡೆಸುವುದಾಗಿ ಹೇಳಿದ್ದಾರೆ. 40 ಪರ್ಸೆಂಟೇಜ್ ಕಮಿಷನ್(40 Percent Commission) ವಿಚಾರದ ಹಿಂದೆ ಹಲವಾರು ಕೋನಗಳಿವೆ ಎಂದರು.
ಸಂತೋಷ್ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ಚರಪ್ಪ ರಾಜೀನಾಮೆಗೆ ಪಕ್ಷದೊಳಗೆ ಒತ್ತಾಯ
ದೊಡ್ಡ ಕೈವಾಡದ ಶಂಕೆ:
ಬೆಳಗಾವಿ ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದ ಹಿಂದೆ ದೊಡ್ಡ ಕೈವಾಡ ಇದೆ. ಕರ್ನಾಟಕದಲ್ಲಿ ನಡೆದಿರುವುದು ಸಣ್ಣ ಘಟನೆಯೇನೂ ಅಲ್ಲ. ಇದರ ಹಿಂದೆ ಖಂಡಿತವಾಗಿಯೂ ದೊಡ್ಡ ಕೈವಾಡದ ಶಂಕೆ ವ್ಯಕ್ತವಾಗುತ್ತಿದೆ. ಸಾವಿನ ಮನೆಯಲ್ಲಿ ಕಾಂಗ್ರೆಸ್(Congress) ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ರಾಜಸ್ಥಾನದಲ್ಲಿ(Rajashthan) ದಲಿತರ(Dalit) ಹತ್ಯೆಯಾಗಿದೆ. ರಾಜಸ್ಥಾನದ ಕರೋಲಿಯಲ್ಲಿ ಆ್ಯಂಬುಲೆನ್ಸ್ನಲ್ಲಿ ಮಹಿಳೆಯರ ಕೊಲೆ, ಅತ್ಯಾಚಾರವಾಗಿದೆ. ದವಲಪುರ, ಸವಾಯಿ, ಮಾಧವಪುರದಲ್ಲಿ ದುರ್ಘಟನೆಗಳು ನಡೆದರೂ ಅಲ್ಲಿಗೆ ಸುರ್ಜೇವಾಲ ಭೇಟಿ ನೀಡಿಲ್ಲ. ಸುರ್ಜೇವಾಲ ಇಲ್ಲಿಗೆ ಬರುವುದು ಬಿಟ್ಟು ಮೊದಲು ರಾಜಸ್ಥಾನಕ್ಕೆ ಹೋಗಬೇಕಿದೆ. ಪ್ರಿಯಾಂಕಾ ಗಾಂಧಿ ಘಟನೆ ನಡೆದ ಸ್ಥಳದಿಂದ ಕೊಂಚ ದೂರವಿದ್ದರೂ ಅವರು ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಅರುಣ ಸಿಂಗ್ ಆರೋಪಿಸಿದರು.