ಹೃದಯಾಘಾತದಿಂದ ಪೊಲೀಸ್ ಸಿಬ್ಬಂದಿ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ರಾಘವೇಂದ್ರ ಹೃದಯಾಘಾತಕ್ಕೆ ಮೃತಪಟ್ಟಿರುವ ಸಿಬ್ಬಂದಿ. ನಿನ್ನೆ ತಡರಾತ್ರಿ ತೀವ್ರ ಹೃದಯಾಘಾದಿಂದ ಸಾವು

ವಿಜಯಪುರ (ಸೆ.5): ಹೃದಯಾಘಾತದಿಂದ ಪೊಲೀಸ್ ಸಿಬ್ಬಂದಿ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ರಾಘವೇಂದ್ರ ಹೃದಯಾಘಾತಕ್ಕೆ ಮೃತಪಟ್ಟಿರುವ ಸಿಬ್ಬಂದಿ. ನಿನ್ನೆ ತಡರಾತ್ರಿ ತೀವ್ರ ಹೃದಯಾಘಾದಿಂದ ಸಾವು. ಮೃತ ಪೊಲೀಸ್ ಸಿಬ್ಬಂದಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ. 2005ರ ಬ್ಯಾಚ್ ಪೊಲೀಸ್ ಸಿಬ್ಬಂದಿ ಆಗಿದ್ದ ರಾಘವೇಂದ್ರ. ಕಳೆದ 18 ವರ್ಷದಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇತ್ತೀಚಿಗಷ್ಟೇ ಬಳ್ಳಾರಿ ಲೋಕಾಯುಕ್ತ ಕಚೇರಿಯಿಂದ ಕಮಲಾಪುರ ಠಾಣೆಗೆ ವರ್ಗಾವಣೆ ಆಗಿದ್ದ ರಾಘವೇಂದ್ರ. ಪ್ರಮೋಷನ್ ಮೇಲೆ ಬಂದು ಕಮಲಾಪುರ ಠಾಣೆ(Kamalapur police station)ಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಘವೇಂದ್ರ ರಾಘವೇಂದ್ರ ನಿಧನಕ್ಕೆ ವಿಜಯನಗರ ಎಸ್ಪಿ ಶ್ರೀಹರಿಬಾಬು ಬಿಎಲ್, DYSP ಮಂಜುನಾಥ್ ತಳವಾರ್, ಹಂಪಿ ಸಿಪಿಐ ಕೆ. ಶಿವರಾಜ್ ಅವರಿಂದ ಕುಟುಂಬಕ್ಕೆ ಸಾಂತ್ವನ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

ವಿಜಯಪುರ: ಲೋಕಾಯುಕ್ತ ಡಿವೈಎಸ್ಪಿ ಹೃದಯಘಾತದಿಂದ ಸಾವು