Asianet Suvarna News Asianet Suvarna News

ಒಂದೇ ದಿನ 7000ಕ್ಕೂ ಹೆಚ್ಚು ವಾಹನ ಜಪ್ತಿ!

  • ನಿಯಮ ಮುರಿದು ರಸ್ತೆಗಿಳಿದ ಜನರ ವಿರುದ್ಧ ನಿಯಮ ಮುರಿದು ರಸ್ತೆಗಿಳಿದ ಜನರ ವಿರುದ್ಧ
  • ಅಗತ್ಯ ವಸ್ತುಗಳ ಖರೀದಿ ಹೊರತುಪಡಿಸಿ ಬೇಕಾಬಿಟ್ಟಿ ರಸ್ತೆಗಿಳಿದಿರುವವರಿಗೆ ಭಾನುವಾರವೂ ಬಿಸಿ ಮುಟ್ಟಿಸಿದ ಖಾಕಿ
  • 7169ಕ್ಕೂ ಅಧಿಕ ವಾಹನಗಳ ಮುಟ್ಟುಗೋಲು
Police Seized 7 thousand Vehicle in Karnataka  snr
Author
Bengaluru, First Published May 10, 2021, 7:34 AM IST

ಬೆಂಗಳೂರು (ಮೇ.10):  ಕೊರೋನಾ ಸೋಂಕು ತಡೆಗೆ ರಾಜ್ಯ ಸರ್ಕಾರ ಘೋಷಿಸಿರುವ ಜನತಾ ಕರ್ಫ್ಯೂ ಕೊನೆಯ ದಿನವಾದ ಭಾನುವಾರದಂದು ನಿಯಮ ಮುರಿದು ರಸ್ತೆಗಿಳಿದ ಜನರ ವಿರುದ್ಧ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಅಗತ್ಯ ವಸ್ತುಗಳ ಖರೀದಿ ಹೊರತುಪಡಿಸಿ ಬೇಕಾಬಿಟ್ಟಿ ರಸ್ತೆಗಿಳಿದಿರುವವರಿಗೆ ಭಾನುವಾರವೂ ಬಿಸಿ ಮುಟ್ಟಿಸಲಾಗಿದ್ದು 7169ಕ್ಕೂ ಅಧಿಕ ವಾಹನಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಮಾತ್ರವಲ್ಲದೆ ನೂರಾರು ಪ್ರಕರಣ ದಾಖಲಿಸಿ ದಂಡವನ್ನೂ ವಿಧಿಸಿದ್ದಾರೆ.

ಇಷ್ಟುಮಾತ್ರವಲ್ಲದೆ ಈಗ ವಶಪಡಿಸಿಕೊಂಡಿರುವ ಹಾಗೂ ಇನ್ನು ಮುಂದಿನ ದಿನಗಳಲ್ಲಿ ವಶಪಡಿಸಿಕೊಳ್ಳುವ ಎಲ್ಲ ರೀತಿಯ ವಾಹನಗಳನ್ನು ಮೇ 24ರವರೆಗೆ ಮಾಲೀಕರಿಗೆ ಮರಳಿ ನೀಡಲಾಗುವುದಿಲ್ಲ ಎಂದು ಕೆಲವೆಡೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಸುಮ್ಮನೆ ಹೊರ ಬಂದರೆ ಹುಷಾರ್‌: ವಾಹನದಲ್ಲಿ ಹೋಗುವಂತಿಲ್ಲ, ನಡೆದೇ ಹೋಗಬೇಕು! ..

ಶನಿವಾರವಷ್ಟೇ 3268 ವಾಹನ ಜಪ್ತಿ ಮಾಡಲಾಗಿದ್ದ ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಭಾನುವಾರ ಮತ್ತೆ 3,214 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಜಿಲ್ಲೆಯಲ್ಲಿ 333 ಪ್ರಕರಣ ದಾಖಲಿಸಿದ್ದು ಒಟ್ಟು 2.25 ಲಕ್ಷ ರು. ದಂಡ ವಸೂಲಿ ಮಾಡಲಾಗಿದೆ. ರಾಜಧಾನಿ ಬೆಂಗಳೂರಿನ ವಿವಿಧೆಡೆ ಬ್ಯಾರಿಕೇಡ್‌ಗಳನ್ನು ಅಳವಡಿಸಿ ತಪಾಸಣೆ ನಡೆಸುತ್ತಿದ್ದ ಪೊಲೀಸರು 2227 ವಾಹನಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ 318 ವಾಹನ ಜಪ್ತಿ ಮಾಡಿ 189 ಪ್ರಕರಣ ದಾಖಲಿಸಲಾಗಿದ್ದು 86 ಸಾವಿರ ದಂಡ ವಸೂಲಿ ಮಾಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ 306 ವಾಹನ ಜಪ್ತಿ ಮಾಡಿ 67 ಸಾವಿರ ದಂಡ ವಿಧಿಸಿದ್ದಾರೆ.

ಇನ್ನುಳಿದಂತೆ ಮೈಸೂರುರಲ್ಲಿ 234, ಹಾವೇರಿ 175, ಕೊಡಗು 159, ಚಿಕ್ಕಮಗಳೂರು 135, ದಕ್ಷಿಣ ಕನ್ನಡ 133, ಗದಗ 89, ಧಾರವಾಡ 70, ತುಮಕೂರಲ್ಲಿ 60, ಕೊಪ್ಪಳ 39, ಉಡುಪಿಯಲ್ಲಿ 10 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona 

Follow Us:
Download App:
  • android
  • ios