ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ, ಕಾಂಗ್ರೆಸ್‌ಗಾಗಿ ದುಡಿದ ಡಿ.ಕೆ.ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರ ತಮ್ಮ ಸಮುದಾಯದ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರು (ಮಾ.22): ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್‌ ಪಕ್ಷಕ್ಕಾಗಿ ದುಡಿದಿದ್ದು ಅವರಿಗೆ ಕೂಲಿ ಸಿಗಬೇಕು. ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಬಳಿ ಒತ್ತಾಯಿಸುತ್ತೇವೆ ಎಂದು ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

 ಶನಿವಾರ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗಲಿ ಎಂದು ಒತ್ತಾಯಿಸಿದ ಸ್ವಾಮೀಜಿಗಳ ಮಠಕ್ಕೆ ಬಜೆಟ್‌ನಲ್ಲಿ ನಯಾಪೈಸೆ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ದಾವಣಗೆರೆ ಕಾಂಗ್ರೆಸ್ ಟಿಕೆಟ್ ಫೈಟ್: ಸಮರ್ಥ್ ಶಾಮನೂರು ಪರ ಡಿಕೆಶಿ-ಅಲ್ಪಸಂಖ್ಯಾತ ಕಾರ್ಡ್‌ ಪ್ಲೇ ಮಾಡಿದ ಸಿದ್ದರಾಮಯ್ಯ!

ನಮ್ಮ ಸಮುದಾಯದ ಯಾವ ಬೇಡಿಕೆಯನ್ನೂ ಸಿದ್ದರಾಮಯ್ಯ ಈಡೇರಿಸಲಿಲ್ಲ. ಹೀಗಾಗಿ ಮೇ ತಿಂಗಳಲ್ಲಿ ವಿವಿಧ ಮಠಾಧೀಶರ ಬೃಹತ್ ಸಭೆಯನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಡಿ.ಕೆ.ಶಿವಕುಮಾರ್ ಅವರ ಸಮಯ ಕೇಳಲು ಬಂದಿದ್ದೆವು. ಸಮಯ ನೀಡಲು ಅವರು ಒಪ್ಪಿದ್ದಾರೆ ಎಂದರು.

ಇದನ್ನೂ ಓದಿ:ಡಿಕೆಶಿ, ಪ್ರಿಯಾಂಕ್ ಖರ್ಗೆ ರೀತಿ ನಮಗೂ ಮಂತ್ರಿ ಪದವಿ ಕೊಡಿ: ಮಂತ್ರಿಗಿರಿಗಾಗಿ ಇಕ್ಬಾಲ್ ಪಟ್ಟು!