Asianet Suvarna News Asianet Suvarna News

108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಿದ ಪ್ರಧಾನಿ ನರೇಂದ್ರ ಮೋದಿ

Narendra Modi in Bengaluru: ಕೆಂಪೇಗೌಡರ ಪ್ರಗತಿಯ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಇಂದು 108 ಅಡಿ ಎತ್ತರದ ಪ್ರತಿಮೆಯನ್ನು ಉದ್ಘಾಟಿಸಿದರು.

prime minister narendra modi inaugurated 108 feet tall kempegowda statue in bengaluru
Author
First Published Nov 11, 2022, 12:11 PM IST

ಬೆಂಗಳೂರು: ಬೆಂಗಳೂರು ಪ್ರವಾಸದಲ್ಲಿರುವ ಪ್ರಧಾನಿ ಮೋದಿ ನಗರಾದ್ಯಂತ ಮಿಂಚಿನ ಸಂಚಾರ ಮಾಡುತ್ತಿದ್ದಾರೆ. ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 2 ಉದ್ಘಾಟಿಸಿದ ನಂತರ ಕೆಂಪೇಗೌಡರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. 108 ಅಡಿ ಎತ್ತರದ ಪ್ರತಿಮೆ ಇದಾಗಿದ್ದು ಪ್ರಗತಿಯ ಪ್ರತೀಕವಾಗಿದೆ. 

ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ ಮೂಲ ಕಾರಣರಾದ ನಾಡಪ್ರಭು ಕೆಂಪೇಗೌಡ ಅವರು ಸದಾ ಎಲ್ಲರಿಗೂ ಸ್ಪೂರ್ತಿಯಾಗಲು ಹಾಗೂ ವಿಶ್ವಕ್ಕೆ ಪರಿಯಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಿರುವ ಕೆಂಪೇಗೌಡ ಅವರ 108 ಅಡಿ ಎತ್ತರದ ಭವ್ಯವಾದ ಕಂಚಿನ ಮೂರ್ತಿಯನ್ನು ಶುಕ್ರವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅನಾವರಣಗೊಳಿಸಲಿದ್ದಾರೆ. 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು 84 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗಿದೆ. 98 ಟನ್‌ ಕಂಚು, 120 ಟನ್‌ ಉಕ್ಕು ಬಳಸಿ ಪ್ರತಿಮೆ ನಿರ್ಮಿಸಲಾಗಿದೆ. 

 

ಕೆಂಪೇಗೌಡ ಆವರ ಕೈಯಲ್ಲಿರುವ ಖಡ್ಗದ ತೂಕ ಬರೋಬ್ಬರಿ ನಾಲ್ಕು ಸಾವಿರ ಕೆ.ಜಿ. ಇದೆ. 24 ಅಡಿ ಎತ್ತರ, 7 ಅಡಿ ಸುತ್ತಳತೆಯ ನಾಲ್ಕು ಗೋಪುರಗಳಿವೆ. ಪ್ರತಿಮೆ ಸುತ್ತ ಆಕರ್ಷಕವಾದ ಥೀಮ್‌ ಪಾರ್ಕ್ ನಿರ್ಮಿಸಲಾಗಿದೆ. ಗುಜರಾತಿನ ‘ಏಕತಾ ಪ್ರತಿಮೆ’, ಅಮೇರಿಕದ ‘ಸ್ಟ್ಯಾಚು ಆಫ್‌ ಲಿಬರ್ಟಿ’ ಸೇರಿದಂತೆ ಜಗತ್ತಿನ ಗಮನಸೆಳೆದಿರುವ ಪ್ರತಿಮೆಗಳ ಸಾಲಿಗೆ ‘ಪ್ರಗತಿಯ ಪ್ರತಿಮೆ’ ಕೂಡ ಸೇರಲಿದೆ. ಪ್ರತಿಮೆಯನ್ನು ಖ್ಯಾತ ಶಿಲ್ಪಿ ನೋಯ್ಡಾದ ರಾಮ್‌ ಸುತರ್‌ ನಿರ್ಮಿಸಿದ್ದಾರೆ. ಗುಜರಾತ್‌ನಲ್ಲಿನ ಸರ್ದಾರ್‌ ವಲಭಬಾಯಿ ಪಟೇಲ್‌ ಪ್ರತಿಮೆಯೂ ಸೇರಿದಂತೆ ಹಲವು ಪ್ರತಿಮೆಗಳನ್ನು ಅರಳಿಸಿರುವ ಸಾಧಕರಾಗಿದ್ದಾರೆ.

ಅಭಿವೃದ್ಧಿಗೆ ಪ್ರೇರಣೆ ಆಗಲಿ ಎಂದು ಕೆಂಪೇಗೌಡ ಪ್ರತಿಮೆ ಸ್ಥಾಪನೆ: ಸಿಎಂ ಬೊಮ್ಮಾಯಿ

ಸಕಲ ಸಜ್ಜು: ಪ್ರತಿಮೆ ಉದ್ಘಾಟನೆಯಾಗಲಿರುವ ವಿಮಾನ ನಿಲ್ದಾಣಕ್ಕೆ ಹೋಗುವ ರಸ್ತೆಗಳ ಎರಡು ಬದಿಗಳಲ್ಲಿ ಮೋದಿ ಸೇರಿದಂತೆ ವಿವಿಧ ಮುಖಂಡರ ಪೋಸ್ಟರ್‌, ಬ್ಯಾನರ್‌ಗಳನ್ನು ಅಳವಡಿಸಲಾಗಿದೆ. ಪ್ರಮುಖ ವೃತ್ತಗಳಲ್ಲಿ ಬಿಜೆಪಿ ಬಾವುಟಗಳು ರಾರಾಜಿಸುತ್ತಿವೆ. ಪಾದಚಾರಿ ಮಾರ್ಗ, ಗೋಡೆಗಳಿಗೆ ಬಣ್ಣ ಬಳಿಯಲಾಗಿದೆ. ಜೊತೆಗೆ ನಗರದ ಸಂಗೋಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್‌ ಸೇರಿದಂತೆ ಮೋದಿ ಅವರು ಸಂಚರಿಸುವ ಎಲ್ಲ ಮಾರ್ಗ, ವೃತ್ತಗಳಲ್ಲಿ ಬ್ಯಾನರ್‌ಗಳು, ಬಾವುಟಗಳು ಬಂಟಿಂಗ್‌ನಿಂದ ಅಲಂಕೃತಗೊಳಿಸಲಾಗಿದೆ.

ಬೊಮ್ಮಾಯಿ ಭೇಟಿ: ಶುಕ್ರವಾರ ನಡೆಯಲಿರುವ ಪ್ರತಿಮೆ ಅನಾವರಣ ಹಾಗೂ ಸಾರ್ವಜನಿಕ ಸಭೆ ನಡೆಯುವ ಸ್ಥಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ವಿವಿಧ ಸೂಚನೆ ನೀಡಿದರು.

ಪಾದ ಪೀಠದಲ್ಲಿ ಮೂಲ ಚಿತ್ರ ರಚನೆ: 108 ಅಡಿ ಎತ್ತರದ ಕಂಚಿನ ಕೆಂಪೇಗೌಡ ಅವರ ಪ್ರತಿಮೆಯ ಪಾದ ಪೀಠದಲ್ಲಿ ಕೆಂಪೇಗೌಡರ ಕಾಲದ ವೈಭವದ ಮೂಲ ಚಿತ್ರಗಳನ್ನು ಹಿರಿಯ ಕಲಾವಿದ ಚಂದ್ರನಾಥ ಆಚಾರ್ಯ ಅವರು ರಚಿಸಿದ್ದಾರೆ.

ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ 30 ಸಾವಿರ ಜನರು: ಬೆಂಗಳೂರಿನಲ್ಲಿ ನ.11ರಂದು ನಡೆಯಲಿರುವ ಪ್ರಗತಿಯ ಪ್ರತಿಮೆ ನಾಡಪ್ರಭು ಕೆಂಪೇಗೌಡ ಅವರ 108 ಅಡಿಗಳ ಕಂಚಿನ ಪ್ರತಿಮೆ ಅನಾವರಣಕ್ಕೆ ಜಿಲ್ಲೆಯಿಂದ ಸುಮಾರು 30 ಸಾವಿರ ಜನರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್‌ ತಿಳಿಸಿದ್ದಾರೆ. ಪ್ರತಿಮೆ ಸಮೀಪ ನಿರ್ಮಾಣವಾಗುತ್ತಿರುವ ಥೀಮ್‌ ಪಾರ್ಕ್ಗೆ ಜಿಲ್ಲಾದ್ಯಂತ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹಿಸಲಾಗಿದೆ. ಇದಕ್ಕೆ ಜಿಲ್ಲೆಯ ಜನರು ಉತ್ತಮ ಸ್ಪಂದನೆ ನೀಡುವುದರ ಜತೆಗೆ ಕೆಂಪೇಗೌಡ ಅವರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಗೌರವದ ಬಗ್ಗೆ ಅಪಾರ ಅಭಿಮಾನ ತೋರಿಸಿದ್ದಾರೆ. 

ಪುಳಕ ಹುಟ್ಟಿಸಿದ ಪ್ರಗತಿ ಪ್ರತಿಮೆಯ ಯಾತ್ರೆ: ಸಚಿವ ಅಶ್ವತ್ಥ್‌ನಾರಾಯಣ

ಅದರಂತೆ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೂ ಬರಲಿದ್ದು, ಇದಕ್ಕಾಗಿ ವಾಹನ ವ್ಯವಸ್ಥೆ ಮಾಡಲಾಗಿದೆ. ನಮ್ಮ ಸರ್ಕಾರ ನಾಡಪ್ರಭುವಿಗೆ ಗೌರವ ಸಲ್ಲಿಸಲು ಯೋಜನೆ ರೂಪಿಸಿ ಅದರಂತೆ ಪೂರ್ಣಗೊಳಿಸಿದೆ ಎಂದಿದ್ದಾರೆ. ನ.11ರಂದು ಬೆಳಗ್ಗೆ 10ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿಮೆ ಅನಾವರಣಗೊಳಿಸಲಿದ್ದು, ಅದೊಂದು ವಿಶೇಷ ಕ್ಷಣವಾಗಲಿದೆ. ಆದ್ದರಿಂದ ಇಂತಹ ಸಮಯದಲ್ಲಿ ಜಿಲ್ಲೆಯ ಜನರು ಪಕ್ಷಾತೀತವಾಗಿ ಪಾಲ್ಗೊಳ್ಳಲಿದ್ದಾರೆ. ನಾಡಪ್ರಭುವಿಗೆ ವಿಶೇಷ ಗೌರವ ಸಲ್ಲಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

Follow Us:
Download App:
  • android
  • ios