Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!

ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್ ಮುಖ್ಯಸ್ಥರಿಗೆ ಪತ್ರ ಬರೆದು ಏಳು ಕಠಿಣ ಪ್ರಶ್ನೆಗಳನ್ನು ಕೇಳುವ ಮೂಲಕ ರಾಜ್ಯ ಸರ್ಕಾರ ಮತ್ತು ಸಂಘದ ನಡುವೆ ಹೊಸ ರಾಜಕೀಯ ಸಮರಕ್ಕೆ ನಾಂದಿ ಹಾಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ.17): ನೂರು ವರ್ಷಗಳ ಇತಿಹಾಸವಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ರಾಜ್ಯ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ರಾಜಕೀಯ ಯುದ್ಧ ಶುರುವಾಗಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್ ಮುಖ್ಯಸ್ಥರಿಗೆ ಪತ್ರ ಬರೆದು ಏಳು ಕಠಿಣ ಪ್ರಶ್ನೆಗಳನ್ನಿಟ್ಟು ಲೆಕ್ಕ ಕೇಳಿರುವುದು ಸಂಚಲನ ಮೂಡಿಸಿದೆ.

RSS ಗೆ ಪ್ರಶ್ನೆ ಕೇಳಿದ್ದು ನಾನಲ್ಲ, ಸರ್ಕಾರ, ನನ್ನ ಪ್ರಶ್ನೆಗೆ ಉತ್ತರ ಕೊಡೋದಾದ್ರೆ ನಾನು ಆರೆಸ್ಸೆಸ್ ಕಚೇರಿಗೆ ಹೋಗಲು ಸಿದ್ಧ: ಪ್ರಿಯಾಂಕ್ ಖರ್ಗೆ

ಗೃಹಸಚಿವರಾದ ಪ್ರಿಯಾಂಕ್ ಖರ್ಗೆ ಆರ್​ಎಸ್ಎಸ್ ವಿರುದ್ಧ ಮತ್ತೊಂದು ಸುತ್ತಿನ ಸಮರ ಸಾರಿದ್ದಾರೆ. ಸಂಘದ ಮುಂದೆ ಏಳು ಪ್ರಶ್ನೆಗಳನ್ನಿಟ್ಟು ಇದು ನಾನ್ ಕೇಳ್ತಿರೋ ಪ್ರಶ್ನೆಯಲ್ಲ. ಸರ್ಕಾರ ಕೇಳ್ತಿರೋ ಪ್ರಶ್ನೆಯಂತ ಪಟ್ಟು ಹಾಕಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರಿಯಾಂಕ್ ಖರ್ಗೆ ಆರ್​ಎಸ್​ಎಸ್​ ಮುಖ್ಯಸ್ಥರಿಗೆ ಪತ್ರ ಬರೆಯುತ್ತಾ ಇದ್ದ ಹಾಗೆ ಬಿಜೆಪಿ ಖರ್ಗೆ ವಿರುದ್ಧ ಮುಗಿಬಿದ್ದಿದೆ. ಸಂಘದಲ್ಲಿ ಏನೂ ಮುಚ್ಚಿಡುವಂತಿಲ್ಲ, ಎಲ್ಲವೂ ಪಾರದರ್ಶಕವಾಗಿರಲಿ ಎಂದು ಖರ್ಗೆ ಬಿಗಿಪಟ್ಟು ಹಿಡಿದಿದ್ದಾರೆ. ತಾವು ಕೇಳಿರುವ ಪ್ರಶ್ನೆಗಳಿಗೆ ಆರ್​ಎಸ್ಎಸ್​ ಉತ್ತರಿಸಬೇಕು ಅಂತ ಗೃಹಸಚಿವ ಪ್ರಿಯಾಂಕ್ ಖರ್ಗೆ ಬಿಗಿಪಟ್ಟು ಹಾಕಿದ್ದಾರೆ.

Related Video