ಚಿತ್ರದುರ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಸೋಮವಾರ ಆಯೋಜಿಸಿದ್ದ ಮೆರವಣಿಗೆಯಲ್ಲಿ ಗಾಂಧಿ ವೃತ್ತದ ಬಳಿ ಕೆಲ ಮುಸ್ಲಿಂ ಯುವಕರು ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿ ಬಾವುಟ ಪ್ರದರ್ಶಿಸಿದ್ದಾರೆ. ಈ ಕುರಿತ ವಿಡಿಯೋಗಳು ಜಾಲತಾಣದಲ್ಲಿ ಹರಿದಾಡಿದ ತಕ್ಷಣ ಜಾಗೃತರಾದ ನಗರ ಠಾಣೆ ಪೊಲೀಸರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಂದ 2 ಪ್ಯಾಲೆಸ್ತೀನ್ ಧ್ವಜಗಳನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಿದ್ದಾರೆ.

ಚಿತ್ರದುರ್ಗ/ಕೋಲಾರ(ಸೆ.17): ಕೊಪ್ಪಳದ ಗಂಗಾವತಿ ಮತ್ತು ಚಿಕ್ಕಮಗಳೂರಿನ ಬಳಿಕ ಇದೀಗ ಚಿತ್ರದುರ್ಗ ಹಾಗೂ ಕೋಲಾರದಲ್ಲಿ ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲೇ ಪ್ಯಾಲೇಸ್ತೀನ್ ಪರ ಘೋಷಣೆ, ಬ್ಯಾನರ್‌ ಹಾಗೂ ಧ್ವಜ ಪ್ರದರ್ಶನದಂಥ ಪ್ರಕರಣಗಳು ಬೆಳಕಿಗೆ ಬಂದಿವೆ. 

Add Asianetnews Kannada as a Preferred SourcegooglePreferred

ಚಿತ್ರದುರ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಸೋಮವಾರ ಆಯೋಜಿಸಿದ್ದ ಮೆರವಣಿಗೆಯಲ್ಲಿ ಗಾಂಧಿ ವೃತ್ತದ ಬಳಿ ಕೆಲ ಮುಸ್ಲಿಂ ಯುವಕರು ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿ ಬಾವುಟ ಪ್ರದರ್ಶಿಸಿದ್ದಾರೆ. ಈ ಕುರಿತ ವಿಡಿಯೋಗಳು ಜಾಲತಾಣದಲ್ಲಿ ಹರಿದಾಡಿದ ತಕ್ಷಣ ಜಾಗೃತರಾದ ನಗರ ಠಾಣೆ ಪೊಲೀಸರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಂದ 2 ಪ್ಯಾಲೆಸ್ತೀನ್ ಧ್ವಜಗಳನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಿದ್ದಾರೆ.

ಕೋಲಾರ ಭಾಗಕ್ಕೆ ಸಿಎಂ ಸ್ಥಾನ ನೀಡಲಿ: ಶಾಸಕ ಕೊತ್ತೂರು ಮಂಜುನಾಥ್

ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್ಪಿ ರಂಜಿತ್ ಕುಮಾರ್‌ ಬಂಡಾರು ತಿಳಿಸಿದ್ದಾರೆ. ಮತ್ತೊಂದು ಘಟನೆಯಲ್ಲಿ ಕೋಲಾರ ನಗರದ ಅಂಜುಮನ್ ಸಂಸ್ಥೆ ಎದುರು ಹಾಕಲಾಗಿದ್ದ 'ಫ್ರೀ ಪ್ಯಾಲೆಸ್ತೀನ್ ' ಎಂಬ ಒಕ್ಕಣೆಯಿರುವ ಬಾವುಟವನ್ನು ಗಮನಿಸಿ ನಗರ ಠಾಣೆ ಸಿಪಿಐ ಸದಾನಂದ ತೆರವುಗೊಳಿಸಿದರು. 

ಇದೇ ರೀತಿ ಕೊಪ್ಪಳದ ಗಂಗಾವತಿಯಲ್ಲೂ ಭಾನುವಾರ ಹಾಕಿದ್ದ ಬ್ಯಾನರ್ ಅನ್ನು ಹಿಂದೂ ಸಂಘನೆಗಳ ವಿರೋಧದ ಹಿನ್ನೆಲೆಯಲ್ಲಿ ತೆರವುಗೊಳಿಸಲಾಗಿದ್ದರೆ, ಚಿಕ್ಕಮಗಳೂರಲ್ಲಿ ಕೆಲ ಯುವಕರು ಪ್ಯಾಲೆಸ್ತೀನ್ ಧ್ವಜ ಹಾರಿಸಿದ್ದರು.